ಬಿಗ್‌ಬಾಸ್‌ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್; ನೆಟ್ಟಿಗರು ಕಿಡಿ

Date:

Advertisements

ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್‌ಬಾಸ್‌ ಮನೆಗೆ ಹೋಗಿರುವ ಪ್ರದೀಪ್‌ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಿಡಿಕಾರಿದ್ದಾರೆ.

ಸೋಮವಾರ ಪ್ರಸಾರವಾದ ಪ್ರೋಮೋದಲ್ಲಿ ಶಾಸಕ ಪ್ರದೀಪ್ ಅವರು ಬಿಗ್‌ಬಾಸ್‌ ಮನೆಗೆ ಪ್ರವೇಶಿಸಿದ್ದಾರೆ. ಕಲರ್ಸ್‌ ಕನ್ನಡದ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಪ್ರೋಮೋ ಪೋಸ್ಟ್‌ ಆಗಿರುವ ಕಾರಣ, ಪ್ರದೀಪ್ ಅವರು ಬಿಗ್‌ಬಾಸ್ ಶೋಗೆ ಹೋಗಿರುವುದು ಖಾತ್ರಿಯಾಗಿದೆ. ಫೋಟೋದಲ್ಲಿ, ‘ಸ್ಪರ್ಧಿಯಾಗಿ ಭಾಗಹಿಸಿರುವುದು ಸಂತೋಷವಾಗಿದೆ’ ಎಂದು ಪ್ರದೀಪ್ ಹೇಳಿದ್ದಾರೆ.

ಕೋಚಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಪ್ರದೀಪ್ ಈಶ್ವರ್‌ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರು.

Advertisements

ಪ್ರೋಮೋ ಪ್ರಸಾರವಾದ ನಂತರ, ನೆಟ್ಟಿಗರು ಪ್ರದೀಪ್ ವಿರುದ್ಧ ಕಿಡಿಕಾರಿದ್ದಾರೆ. ಹಲವರು ಬಿಗ್‌ಬಾಸ್ ಕನ್ನಡದಲ್ಲಿ ಚುನಾಯಿತ ಪ್ರತಿನಿಧಿ ಭಾಗವಹಿಸುವುದನ್ನು ಖಂಡಿಸಿದ್ದಾರೆ.

ನೆಟ್ಟಿಗ ಗಜಾನಂದ ಮೋಳ್ಕೆರೆ ಎಂಬವರು ತಮ್ಮ ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. “ಬಿಗ್‌ಬಾಸ್‌ ಮನೆಗೆ ಹೋಗಿರುವ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಯವಿಟ್ಟು ಕ್ರಮ ಕೈಗೊಳ್ಳಿ. ಜನರು ತಮ್ಮ ಸೇವೆಗಾಗಿ ಅವರನ್ನು ಆಯ್ಕೆ ಮಾಡಿದ್ದಾರೆ. ಆದರೆ, ಅವರು ಬೇಜವಾಬ್ದಾರಿಯಿಂದ ಬಿಗ್‌ಬಾಸ್‌ ಶೋಗೆ ಹೋಗಿದ್ದಾರೆ” ಎಂದು ಕಿರಿಕಾರಿದ್ದಾರೆ.

ಮತ್ತೊಬ್ಬ ಬಳಕೆದಾರ ಅಭಿಷೇಕ್ ಎಂಬವರು ಕೂಡ ಪ್ರದೀಪ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಎಲ್ಲರು ತೆರಿಗೆ ಪಾವತಿಸುತ್ತಾರೆ. ಅವರು ಸಂಬಳ ಮತ್ತು ಭತ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಪ್ರಪಂಚದೊಂದಿಗೆ ಸಂಪರ್ಕವೇ ಇರುವುದಿಲ್ಲ ಎನ್ನುವ ರಿಯಾಲಿಟಿ ಶೋಗಳಿಗೆ ಅವರು ಹೋಗುತ್ತಾರೆ. ಜನಪ್ರತಿನಿಧಿಗಳು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮಂಜುನಾಥ್ ಎಂಬುವವರು, “ಏನಿದು ಸರ್? ಸಾರ್ವಜನಿಕ ಸೇವೆ ಮಾಡುವುದಕ್ಕಿಂತ ಬಿಗ್‌ಬಾಸ್ ಪ್ರವೇಶಿಸುವುದು ಹಾಸ್ಯಾಸ್ಪದವಾಗಿದೆ. ರಿಯಾಲಿಟಿ ಶೋಗಳಲ್ಲಿ ಭಾಗವಹಿಸಲು ಜನರು ಅವರನ್ನು ಆಯ್ಕೆ ಮಾಡಿದ್ದಾರೆಯೇ. ಎಂಎಲ್‌ಎ ಹುದ್ದೆಗೆ ಗೌರವವಿಲ್ಲವೇ?” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಕೆಲಸದಿಂದ ತೆಗೆದು ಹಾಕಿ ಸಂಬಳ ನೀಡಿಲ್ಲವೆಂದು ಕೋಪದಿಂದ ಕಂಪನಿಗೆ ಬೆಂಕಿ ಇಟ್ಟ ಉದ್ಯೋಗಿಗಳು

ಪ್ರದೀಪ್‌ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ ಪಿ ಬಚ್ಚೇಗೌಡ ಮಾತನಾಡಿದ್ದು, “ಇದು ಅವರ ವೈಯಕ್ತಿಕ ವಿಚಾರ. ನನಗೆ ಬಂದ ಮಾಹಿತಿಯ ಪ್ರಕಾರ, ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವೇ ದಿನಗಳಲ್ಲಿ ಅವರು ಹೊರಬರುತ್ತಾರೆ. ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅವಕಾಶ ಕೊಡೋಣ. ಅದರ ಬಗ್ಗೆ ಈಗ ಪ್ರತಿಕ್ರಿಯಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X