ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ನಡೆಸಲಿದೆ: ಸಚಿವ ಜಮೀರ್‌ ವಿಶ್ವಾಸ

Date:

  • ಮುಸ್ಲಿಂ ಸಮುದಾಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು?: ಜಮೀರ್‌
  • ಸಣ್ಣ ಗಲಾಟೆಯಾದರೂ ಬಿಜೆಪಿಯವರು ಪಾಕಿಸ್ತಾನ ಮಾಡುತ್ತಾರೆ

ರಾಜ್ಯದಲ್ಲಿ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್‌ ಅಧಿಕಾರ ನಡೆಸಲಿದೆ. ಇದನ್ನು ಯಾರೂ ತಪ್ಪಿಸಲಾಗದು ಎಂದು ಸಚಿವ ಜಮೀರ್‌ ಅಹಮದ್ ಖಾನ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಮಾತನಾಡಿದ ಸಚಿವರು, “ಈಗಿನ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವುದರಿಂದ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರ ನಡೆಸುವುದು ಖಚಿತ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮುಖ್ಯಮಂತ್ರಿಯ ಅವಧಿ ಎಷ್ಟು ವರ್ಷ ಎನ್ನುವ ಪ್ರಶ್ನೆಗೆ ಉತ್ತರಿಸಿ, “ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ ನಮ್ಮದು. ಎಲ್ಲ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು.

ಮುಸ್ಲಿಂ ಸಮುದಾಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು?

ಜೆಡಿಎಸ್ – ಬಿಜೆಪಿ ಹೊಂದಾಣಿಕೆ ಆದ ಬಳಿಕ ಉಳಿದುಕೊಂಡಿರುವುದು ಏಕೈಕ ಜಾತ್ಯತೀತ ಪಕ್ಷ ಕಾಂಗ್ರೆಸ್. ಸರ್ಕಾರ ಹೋದರೆ ಮುಸಲ್ಮಾನರು ನನ್ನ ಬಳಿಯೇ ಬರಬೇಕು ಎನ್ನುವ ಕುಮಾರಸ್ವಾಮಿ ಮುಸಲ್ಮಾನರಿಗೆ ಏನು ಕೊಡುಗೆ ಕೊಟ್ಟಿದ್ದಾರೆ? ದೇವೇಗೌಡರ ಕೊಡುಗೆ ಇದೆ. ಮೀಸಲಾತಿ ವಿಚಾರ ಇರಲಿ, ಈದ್ಗಾ ಮೈದಾನ ವಿಚಾರ ಇರಲಿ ದೇವೇಗೌಡರ‌ ಕೊಡುಗೆ ಸಾಕಷ್ಟು ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದ ಜಾತಿ ಜನಗಣತಿ- ಕಮಂಡಲ ರಾಜಕಾರಣ ಕಕ್ಕಾಬಿಕ್ಕಿ

ಸಣ್ಣ ಗಲಾಟೆಯಾದರೂ ಪಾಕಿಸ್ತಾನ ಮಾಡಲು ಹೋಗುತ್ತಾರೆ

“ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಆಗಬಾರದಿತ್ತು, ಆದರೆ ಆಗಿದೆ. ಬಿಜೆಪಿಯವರಿಗೆ ಹೇಳಲು ಏನು ಇಲ್ಲ. ಪ್ರತಿ ಸಲ ಸಣ್ಣ-ಪುಟ್ಟ ಗಲಾಟೆಯಾದರೂ ಸಿ ಟಿ ರವಿ, ಈಶ್ವರಪ್ಪ ಆಗಲಿ, ಅದನ್ನು ಪಾಕಿಸ್ತಾನ ಮಾಡಲು ಹೊಗುತ್ತಾರೆ. ಜಿಲ್ಲಾಡಳಿತದಿಂದ ಅನುಮತಿ ಪಡೆದು ಔರಂಗಜೇಬ್ ಕಟೌಟ್ ಮೆರವಣಿಗೆ ಮಾಡಿದ್ದೀವಿ. ಆದರೆ, ಪರ್ಮಿಷನ್ ಇಲ್ಲವೆಂದು ಮಾಧ್ಯಮದವರು ಹೇಳಿದ್ದಾರೆ. ಈಗ ಆ ಬಗ್ಗೆ ಚರ್ಚೆ ಬೇಡ. ಈಗ ಶಾಂತವಾಗಿದೆ. ಯಾವ ಸಮಸ್ಯೆನೂ ಇಲ್ಲ” ಎಂದರು.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ” ಹಿರಿಯ ನಾಯಕರು, ಅವರ ಬಗ್ಗೆ ಗೌರವವಿದೆ. 7 ಜನ ಲಿಂಗಾಯತರನ್ನು ನಾವು ಮಂತ್ರಿ ಮಾಡಿದ್ದೇವೆ. ಅವರಂತೆ ನಾನು ಮುಸ್ಲಿಂಮರಿಗೆ ಇಂತಹ ಕಡೆ ಪೋಸ್ಟ್ ಕೊಡಿ ಎಂದು ಹೇಳಲಾಗುತ್ತಾ? ಯಾವ ಅಧಿಕಾರಿ ಉತ್ತಮ ಕೆಲಸ ಮಾಡ್ತಾರೆ ಅವರನ್ನು ಹಾಕಿಸಿಕೊಳ್ಳಬೇಕು. ಕಲಬುರಗಿಯಲ್ಲಿ ಫೌಜಿಯಾ ಎಂಬ ಡಿಸಿ ಇದ್ದಾರೆ. ಅವರು ಒಳ್ಳೆ ಕೆಲಸ ಮಾಡಿದ್ದಾರೆ, ಅವರಿಗೆ ಡಿಮ್ಯಾಂಡ್ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...