ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್

Date:

Advertisements

ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಡೆತ್‌ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

Advertisements

ಈ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್, “ಬಿಜೆಪಿಯವರು ಈ ಪ್ರಕರಣವನ್ನು ಸಿಬಿಐಗೆ ನೀಡಲು ಆಗ್ರಹಿಸುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಅನಾವಶ್ಯಕ ರಾಜಕೀಯ ಸರಿಯಲ್ಲ. ಅಷ್ಟಕ್ಕೂ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ನೀಡಲಾಗದು. ಈ ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು” ಎಂದು ತಿಳಿಸಿದರು.

“ಈ ಪ್ರಕರಣದಲ್ಲಿ ಬಿಜೆಪಿ ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಯತ್ನ ಮಾಡುತ್ತಿದ್ದಾರೆ. ಸಚಿವರ ಹೆಸರು ಡೆತ್‌ನೋಟ್‌ನಲ್ಲಿ ಎಲ್ಲೂ ನೇರವಾಗಿಲ್ಲ. ಇನ್ನು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಎಲ್ಲಾ ತನಿಖೆ ನಡೆದ ಬಳಿಕವೇ ಸತ್ಯಾಸತ್ಯತೆ ತಿಳಿಯಲಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X