ಭ್ರಷ್ಟಾಚಾರ, ಕಮಿಷನ್ ಹಾವಳಿ ಈ ಸರ್ಕಾರದಲ್ಲಿ ಮಿತಿ ಮೀರಿದೆ: ಹೆಚ್ ಡಿ ಕುಮಾರಸ್ವಾಮಿ ಆರೋಪ

Date:

Advertisements

ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ” ಎಂದು ಹೇಳಿದರು.

“ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣ ಬೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ” ಎಂದು ಪ್ರಶ್ನಿಸಿದರು.

Advertisements

“ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ” ಎಂದು ಅವರು ಕಿಡಿಕಾರಿದರು.

ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ

“ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನಾನು ಮೊದಲೇ ಹೇಳಿದ್ದೇನೆ. ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ” ಎಂದು ದೂರಿದರು.

ಭೂಮಿ ತೆರವಿಗೆ ರಚಿಸಿಲಾಗಿರುವ ಎಸ್ಐಟಿಗೆ ಹೈಕೋರ್ಟ್ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿ, “ಅದು 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ. ಅಲ್ಲಿ ಯಾವುದೇ ರೀತಿಯ ಒತ್ತುವರಿ ಆಗಿಲ್ಲ. ಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಅದು ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ” ಎಂದರು.

ಡಿಕೆಶಿ ಕಡೆಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ

2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂದು ಡಿಸಿಎಂ ಡಿಕೆಶಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ, “ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ. ದಾರಿದ್ರ್ಯ ಇರುವುದು ಅವರಿಗೆ. ಮನುಷ್ಯತ್ವದ ದಾರಿದ್ರ್ಯ ಅವರಿಗೆ ಇದೆ. ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ” ಎಂದರು.

ಡಿ.ಕೆ.ಸುರೇಶ್ ಅವರನ್ನು ಬಮುಲ್ ಅಧ್ಯಕ್ಷ ಮಾಡಿಕೊಂಡಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಸರ್ಕಾರ ಇದೆ, ಏನು ಬೇಕಾದರೂ ಮಾಡಿಕೊಳ್ಳುತ್ತಾರೆ. ಸಮಯ ಬರುತ್ತೆ ಅದಕ್ಕೆ ಉತ್ತರ ಕೋಡೋಣ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X