ದೇಶದ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ರಾಜ್ಯದಲ್ಲಿ ಉದ್ಘಾಟನೆ

Date:

Advertisements

ಶರಾವತಿ ನದಿ ಹಿನ್ನೀರಿನ ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಉದ್ಘಾಟಿಸಿದರು.

ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ಸಿಕ್ಕಿದೆ. ಶರಾವತಿ ನದಿಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಿಸಲಾಗಿದೆ.

ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಅವರ ಯಾವುದೇ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್ಎನ್ ಚನ್ನಬಸಪ್ಪ, ಡಿಎಸ್ ಅರುಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಧಿಕಾರಿಗಳ ಪ್ರಕಾರ, ಸಾಗರ ತಾಲ್ಲೂಕಿನ ಅಂಬರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಈ ಸೇತುವೆಯನ್ನು 472 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಸೇತುವೆಯು 2.44 ಕಿಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. ಈ ಸೇತುವೆಯು ಸಾಗರದಿಂದ ಸಿಗಂದೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ದೂರವನ್ನು ಕಡಿಮೆ ಮಾಡುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X