ಕೃತಿ ಬಿಡುಗಡೆ ವೇಳೆ ದಲಿತ ಲೇಖಕನಿಗೆ ಅವಮಾನ; ಆರೋಪ

Date:

Advertisements

ದಲಿತ ಲೇಖಕರೊಬ್ಬರ ಪುಸ್ತಕವನ್ನು ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದರೂ ಲೇಖಕರನ್ನು ವೇದಿಕೆಗೆ ಕರೆಯದಿರುವ ಪ್ರಮಾದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದಿದೆ.

ಕನಕದಾಸರ ಜನ್ಮದಿನದ ಪ್ರಯುಕ್ತ ‘ಕರ್ನಾಟಕ ತತ್ವಪದಕಾರರ ಹದಿನೆಂಟು ಸಂಪುಟಗಳ ಬಿಡುಗಡೆ ಸಮಾರಂಭ’ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಆದರೆ ಕಾರ್ಯಕ್ರಮ ಸಂಘಟಕರು ಸಾಹಿತಿ ಗಂಗಪ್ಪ ತಳವಾರ ಅವರನ್ನು ವೇದಿಕೆಗೆ ಆಹ್ವಾನಿಸಲಿಲ್ಲ. ಗಂಗಪ್ಪ ಅವರು ಭಾವಾನುವಾದ ಮಾಡಿರುವ ‘ಗುಟ್ಟಹಳ್ಳಿ ಆಂಜನಪ್ಪ ಅವರ ಸುಜ್ಞಾನ ಬೋಧ ತತ್ವಗಳು ಸಂಪುಟ’ ಕೃತಿಯನ್ನೂ ಬಿಡುಗಡೆ ಮಾಡಲಾಗಿತ್ತು.

‘ಈದಿನ.ಕಾಮ್‌’ನೊಂದಿಗೆ ಮಾತನಾಡಿದ ಗಂಗಪ್ಪ ಅವರು, “ಎಲ್ಲ ಲೇಖಕರನ್ನು ವೇದಿಕೆಗೆ ಕರೆದರು. ನನ್ನನ್ನು ಆಹ್ವಾನಿಸಲಿಲ್ಲ. ದೂರದ ಊರಿನಿಂದ ಕುಟುಂಬ ಸಮೇತವಾಗಿ ಕಾರ್ಯಕ್ರಮಕ್ಕೆ ಬಂದಿದ್ದೆ. ಸೌಜನ್ಯಕ್ಕೂ ನನ್ನ ಹೆಸರು ಉಲ್ಲೇಖಿಸದೆ ಅವಮಾನಿಸಿದರು. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ.ತ.ಚಿಕ್ಕಣ್ಣ ಅವರ ಬೇಜವಾಬ್ದಾರಿತನದಿಂದ ಈ ಘಟನೆ ನಡೆದಿದೆ. ಗೌರವಪ್ರತಿಯನ್ನೂ ಕೊಟ್ಟಿಲ್ಲ. ಕೇಳಿದರೆ ಹಣ ನೀಡುವಂತೆ ಹೇಳುತ್ತಿದ್ದಾರೆ. ಘಟನೆ ವರದಿಯಾದ ಬಳಿಕ ಚಿಕ್ಕಣ್ಣ ಕರೆ ಮಾಡಿ ಕ್ಷಮೆಯಾಚಿಸುವ ಮಾತನಾಡುತ್ತಿದ್ದಾರೆ” ಎಂದು ತಿಳಿಸಿದರು.

Advertisements

ಇದನ್ನು ಓದಿರಿ: ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

“ಈ ಕಾರ್ಯಕ್ರಮಕ್ಕೆ ಹಲವಾರು ಗಣ್ಯರನ್ನು ಆಮಂತ್ರಿಸಿ ಬಹಳಷ್ಟು ಜನರಿಗೆ ಗೌರವವನ್ನೂ ಸೂಚಿಸಿದ್ದಾರೆ. ನನ್ನ ಹೆಸರನ್ನೂ ಹೇಳದೆ ಅವಮಾನಿಸಿರುವ ಘಟನೆ ಮುಖ್ಯಮಂತ್ರಿಗಳ ಎದುರಲ್ಲಿ ನಡೆಯಿತು. ಅಷ್ಟು ಕೃತಿಗಳನ್ನು ಬಿಡುಗಡೆ ಮಾಡಿದರೂ ಲೇಖಕರ ಹೆಸರುಗಳನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿಲ್ಲ. ಕಚೇರಿಯಿಂದ ಕರೆಬಂದಿತ್ತಷ್ಟೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X