ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿಯ ಕತ್ತು ಕೊಯ್ದ ದರ್ಶನ್ ಅಭಿಮಾನಿಗಳು

Date:

Advertisements

ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ ತಾಲ್ಲೂಕಿನ ದೊಡ್ಡ ಮಣ್ಣುಗುಡ್ಡೆ ಗ್ರಾಮದ ಕಟ್ಟಡದ ಮೇಸ್ತ್ರಿ ಸುರೇಶ್ ಎಂಬುವವರು ಸೂಲಿಕೆರೆ ಎಂಬಲ್ಲಿ ಮನೆ ನಿರ್ಮಾಣದ ಕೆಲಸಕ್ಕೆ ವೆಂಕಟಸ್ವಾಮಿ ಕರೆದುಕೊಂಡು ಬಂದಿದ್ದರು. ಕೆಲಸ ನಡೆಯುವ ಜಾಗದಲ್ಲೇ ಸಣ್ಣದೊಂದು ಶೆಡ್ ನಿರ್ಮಾಣ ಮಾಡಿಕೊಂಡು ಅಲ್ಲಿಯೇ ವಾಸವಿದ್ದರು. ಹೀಗಿರುವಾಗ ಗುರುವಾರ ರಾತ್ರಿ ವೆಂಕಟಸ್ವಾಮಿ ಹಾಗೂ ಇತರರು ವಾಸವಿರುವ ಶೆಡ್ ಬಳಿ ಬಂದ ಮೂವರು ದರ್ಶನ್ ಬಗ್ಗೆ ಮಾತನಾಡುತ್ತ ಜೋರಾಗಿ ಡಿ ಬಾಸ್ ಎಂದು ಘೋಷಣೆಗಳನ್ನು ಕೂಗಲು ಶುರುಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

Advertisements

ಆರೋಪಿಗಳು ಘೋಷಣೆ ಕೂಗಿದ್ದರಿಂದ ಶೆಡ್‌ನಲ್ಲಿ ಮಲಗಿದ್ದ ವೆಂಕಟಸ್ವಾಮಿ ಅಕ್ಕಪಕ್ಕ ಮನೆಗಳಿಗೆ ದಯವಿಟ್ಟು ಕೂಗಬೇಡಿ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿ ಕಿರಣ್ ಎಂಬಾತ ನಮ್ಮ ಡಿಬಾಸ್ ಬಗ್ಗೆ ನಿನಗೆ ಏನ್ಗೊತ್ತು ಎಂದು ಗಲಾಟೆ ತೆಗೆದಿದ್ದು, ವೆಂಕಟಸ್ವಾಮಿಯ ಕತ್ತು ಕೊಯ್ದಿದ್ದಾನೆ. ಇದಲ್ಲದೆ ಆರೋಪಿ ಕಿರಣ್ ಜೊತೆಗಿದ್ದ ಮಹದೇವ ಎಂಬಾತನು ಕೂಡ ಮಹದೇವಸ್ವಾಮಿ ಮೇಲೆ ಹಲ್ಲೆ ನಡೆಸಿದ್ದು, ಅಕ್ಕಪಕ್ಕದವರು ಬಂದು ಕೂಡಲೇ ವೆಂಕಟಸ್ವಾಮಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ವೆಂಕಟಸ್ವಾಮಿ ಅವರ ಪತ್ನಿ ಘಟನೆ ಕುರಿತು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರು ದಾಖಲಾಗುತ್ತಿದ್ದಂತೆ ಆರೋಪಿಗಳಾದ ಕಿರಣ್‌ ಹಾಗೂ ಮಹಾದೇವ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಶೀಘ್ರದಲ್ಲೇ ಬಂದಿಸುವ ಭರವಸೆ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X