ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

Date:

Advertisements

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್‌ ರವಿಕುಮಾರ್‌ ವಿರುದ್ಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದ ವಿಧಾನ ಪರಿಷತ್ ಮುಖ್ಯ‌ ಸಚೇತಕ ಸಲೀಂ ಅಹಮದ್ ನಿಯೋಗ ಮನವಿ ಸಲ್ಲಿಸಿದೆ.

ಗುರುವಾರ ಸಭಾಪತಿಗಳನ್ನು ಭೇಟಿಯಾದ ಸಲೀಂ ಅಹ್ಮದ್‌ ನಿಯೋಗವು, ಎನ್‌ ರವಿಕುಮಾರ್‌ ಹೇಳಿಕೆ ಸಾರ್ವಜನಿಕವಾಗಿ ಮತ್ತು ಮಾಧ್ಯಮ/ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಗೊಂಡಿದ್ದು, ಅಧಿಕಾರಿಕ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿ ವ್ಯಕ್ತಿತ್ವವನ್ನು ಅವಹೇಳನಗೊಳಿಸುವ ಕೆಲಸವಾಗಿದೆ. ಈ ರೀತಿಯ ಹೇಳಿಕೆಗಳು ಸರ್ಕಾರದ ಅತೀ ಉನ್ನತ ಪದವಿಯ ನಾಗರಿಕ ಸೇವಾಧಿಕಾರಿಗಳ ಧೈರ್ಯ ಮತ್ತು ಪ್ರಾಮಾಣಿಕತೆಗೆ ಚ್ಯುತಿ ತರುತ್ತದೆ” ಎಂದು ಮನವರಿಕೆ ಮಾಡಿತು.

ಎನ್‌ ರವಿಕುಮಾರ್‌ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಧಾನ ಪರಿಷತ್‌ನ ನಿಯಮಗಳು ಹಾಗೂ ನೈತಿಕ ಮಾರ್ಗಸೂಚಿಗಳ ಪ್ರಕಾರ ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸಭಾಪತಿಗಳನ್ನು ನಿಯೋಗ ಆಗ್ರಹಿಸಿತು.

Advertisements

“ತ್ವರಿತ ಕ್ರಮ ಕೈಗೊಂಡಲ್ಲಿ ಸಾರ್ವಜನಿಕ ಸೇವೆಯ ಗೌರವ ಮತ್ತು ಪರಿಷತ್ತಿನ ಪವಿತ್ರತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಈ ನಡೆ ಸಂಸತ್ತಿನ ನೀತಿ ಸಂಹಿತೆಯ ನಿಯಮಗಳಿಗೆ ವಿರುದ್ಧವಾಗಿದ್ದು, ಮಹಿಳಾ ಅಧಿಕಾರಿಗಳಿಗೆ ಅಗೌರವ ಪ್ರದರ್ಶಿಸುವ ಪ್ರವೃತ್ತಿಯಾಗಿರುತ್ತದೆ. ವ್ಯಕ್ತಿಗತ ನಿಂದನೆ ಮಾಡುವ ಮೂಲಕ, ಸಮಾಜದಲ್ಲಿ ಕೀಳು ಅಭಿರುಚಿ ಎಬ್ಬಿಸುವ ಈ ಹೇಳಿಕೆ ವಿಧಾನ ಪರಿಷತ್ ಸದಸ್ಯನ ಸ್ಥಾನಕ್ಕೆ ಒಪ್ಪದಂತಹ ಹಾಗೂ ಪರಿಷತ್ತಿನ ಗೌರವವನ್ನು ಕುಗ್ಗಿಸುವ ಪ್ರವೃತ್ತಿಯಾಗಿರುತ್ತದೆ” ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಸಲೀಂ ಅಹಮದ್ ನಿಯೋಗದಲ್ಲಿ ಬಿ ಕೆ ಹರಿಪ್ರಸಾದ್, ಮಂಜುನಾಥ್ ಭಂಡಾರಿ, ನಾಗರಾಜ ಯಾದವ್, ಬಲ್ಕಿಸ್ ಬಾನು
ಮಲ್ಲಾಜಮ್ಮ, ರಾಮೋಜಿ ಗೌಡ, ಡಿಟಿ ಶ್ರೀನಿವಾಸ್ ಹಾಗೂ ರಮೇಶ್ ಬಾಬು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X