ಬೂಕರ್ ಪ್ರಶಸ್ತಿ ವಿಜೇತರಿಗೆ ತಲಾ 10 ಲಕ್ಷ ಹಮ್ಮಿಣಿ ನೀಡಲು ಆಗ್ರಹ

Date:

Advertisements

ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರುಗಳಿಗೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ಹಮ್ಮಿಣಿ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಮೊನ್ನೆಯಷ್ಟೇ ಪ್ರತಿಷ್ಠಿತ ಬೂಕರ್ ಪ್ರಶಸ್ತಿಯನ್ನು ಕನ್ನಡಕ್ಕೆ ದೊರಕಿಸಿಕೊಟ್ಟ ಬಾನು ಮುಷ್ತಾಕ್ ಹಾಗೂ ಅನುವಾದಕಿ ದೀಪಾ ಬಾಸ್ತಿ ಅವರುಗಳಿಗೆ ಪ್ರಶಸ್ತಿ ಮೊತ್ತವಾಗಿ ಒಬ್ಬೊಬ್ಬರಿಗೆ ಅಂದಾಜು 28.5 ಲಕ್ಷ ರೂಪಾಯಿ ದೊರಕಿರುತ್ತದೆ. ವಿಚಿತ್ರವೆಂದರೆ ಈ ಪುರಸ್ಕಾರದ ಹಣದ ಮೇಲೆಯೂ ಕೇಂದ್ರ ಸರ್ಕಾರ ಅಂದಾಜು 30% ರಷ್ಟು ಜಿಎಸ್‌ಟಿ ಇತ್ಯಾದಿ ರೂಪದಲ್ಲಿ ಟ್ಯಾಕ್ಸ್‌ ವಿಧಿಸುತ್ತದೆ. ಬೂಕರ್ ಪ್ರಶಸ್ತಿ ಪುರಸ್ಕೃತರಾದ ಇಬ್ಬರು ಮಹಿಳೆಯರಿಗೆ ಯಾವುದೇ ತೆರಿಗೆಗಳನ್ನು ವಿಧಿಸದೆ ಪ್ರಶಸ್ತಿಯ ಸಂಪೂರ್ಣ ಮೊತ್ತವು ಸಿಗುವಂತೆ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.

WhatsApp Image 2025 05 23 at 6.25.47 PM

ಇದನ್ನೂ ಓದಿ: ಬಾನು ಮುಷ್ತಾಕ್‌ ಬರಹಕ್ಕೆ ಇನ್ನಾದರೂ ʼಸಾಹಿತ್ಯಕ ಮನ್ನಣೆʼ ಸಿಗಲಿ

Advertisements

“ಇನ್ನು ರಾಜ್ಯ ಸರ್ಕಾರವು ಈ ಇಬ್ಬರಿಗೂ ತಲಾ 10 ಲಕ್ಷ ರೂಪಾಯಿಯಂತೆ ವಿಶೇಷ ಹಮ್ಮಿಣಿಯನ್ನು ಅರ್ಪಿಸಬೇಕೆಂದು ಒತ್ತಾಯಿಸಿರುವ ಅವರು, ಈ ಹಿಂದೆ ಡಾ. ಚಂದ್ರಶೇಖರ ಕಂಬಾರ್ ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಕರ್ನಾಟಕ ಸರ್ಕಾರ ಅವರಿಗೆ ವಿಶೇಷವಾಗಿ 5 ಲಕ್ಷ ರೂಪಾಯಿ ಹಮ್ಮಿಣಿಯನ್ನು ಅರ್ಪಿಸಿತ್ತು. ಡಾ. ಭೈರಪ್ಪನವರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಬಂದಾಗಲೂ 5 ಲಕ್ಷ ರೂಪಾಯಿ ಹಮ್ಮಿಣಿಯನ್ನು ನೀಡಲಾಗಿತ್ತು. ಅದೇ ರೀತಿ ಈ ಇಬ್ಬರು ಹೆಮ್ಮೆಯ ಕನ್ನಡದ ಸಾಹಿತಿಗಳಿಗೆ ತಲಾ 10 ಲಕ್ಷ ರೂಪಾಯಿಯಂತೆ ಹಮ್ಮಿಣಿ ನೀಡಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X