ದೇವನಹಳ್ಳಿ ರೈತ ಹೋರಾಟ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮೇಧಾ ಪಾಟ್ಕರ್‌

Date:

Advertisements

ದೇವನಹಳ್ಳಿ ರೈತ ಹೋರಾಟಕ್ಕೆ ಸಂಬಂಧಿಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಪತ್ರ ಬರೆದಿದ್ದಾರೆ. “ದೇವನಹಳ್ಳಿ ರೈತರ ಭೂಮಿಯನ್ನು ಕಸಿದು ನಡೆಸಲಿರುವ ಏರೋಸ್ಪೇಸ್ ಪಾರ್ಕ್ ಯೋಜನೆಯನ್ನು ಕೈಬಿಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ರೈತರು, ಕಾರ್ಮಿಕರು, ಸಣ್ಣ ಪ್ರಮಾಣದ ವ್ಯಾಪಾರಿಗಳು ತಮ್ಮ ಜೀವ ಮತ್ತು ಜೀವನೋಪಾಯವನ್ನು ಉಳಿಸಿಕೊಳ್ಳಲು ಅಹಿಂಸಾತ್ಮಕವಾಗಿ ಹೋರಾಡುತ್ತಿರುವವರ ಬಗ್ಗೆ ನಾನು ಮತ್ತೊಮ್ಮೆ ನಿಮಗೆ ಪತ್ರ ಬರೆಯುತ್ತಿದ್ದೇನೆ. ದೇವನಹಳ್ಳಿ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಲ್ಲಿ 6000 ಎಕರೆಗಳಿಗೂ ಹೆಚ್ಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಪುನರ್ವಸತಿ ಪಡೆಯಲೂ ಸಾಧ್ಯವಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

Advertisements

“ಸಿದ್ದರಾಮಯ್ಯ ಅವರೇ ನಿಮ್ಮ ನೇತೃತ್ವದ ಸರ್ಕಾರವು ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬಿಟ್ಟುಬಿಡುತ್ತದೆ ಎಂದು ನಾವು ನಿರೀಕ್ಷಿಸುವುದಿಲ್ಲ. ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕೈಗಾರಿಕಾ ಎಸ್ಟೇಟ್‌ಗಾಗಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾದ ಭೂಮಿಯನ್ನು ಅವಲಂಬಿಸಿರುವ ಎಲ್ಲರ ಬೆಂಬಲಕ್ಕೆ ನೀವು ನಿಲ್ಲುತ್ತೀರಿ ಎಂದು ನಿರೀಕ್ಷಿಸುತ್ತೇವೆ. ತಲೆಮಾರುಗಳಿಂದ ಅವಲಂಬಿಸಿರುವ ಅವರ ಏಕೈಕ ಜೀವನೋಪಾಯದ ಮೂಲವನ್ನು ಉಳಿಸುವ ನಿರ್ಧಾರ ಕೈಗೊಳ್ಳುತ್ತೀರಿ ಎಂಬ ನಿರೀಕ್ಷೆಯಿದೆ” ಎಂದು ಪತ್ರದಲ್ಲಿ ಮೇಧಾ ಉಲ್ಲೇಖಿಸಿದ್ದಾರೆ.

“ನಿಮ್ಮ ನಾಯಕತ್ವದ ಪೊಲೀಸ್ ಆಡಳಿತವು ದಮನಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಎಂದಿಗೂ ನಿರೀಕ್ಷಿಸಿರಲಿಲ್ಲ. ನಿಮ್ಮ ಸಂಪುಟದ ಮಂತ್ರಿಗಳನ್ನು ಮನವೊಲಿಸಿ ಆಹಾರ ಭದ್ರತೆಯನ್ನು ರಕ್ಷಿಸಲು ಈ ಭೂಮಿಯನ್ನು ಉಳಿಸಲು ನೀವು ನಿರ್ಧಾರ ತೆಗೆದುಕೊಳ್ಳುತ್ತೀರಿ ಎಂದು ನಾವು ನಿರೀಕ್ಷಿಸಿದ್ದೇವೆ” ಎಂದಿದ್ದಾರೆ.

“ಕೈಗಾರಿಕೆಗಳು ವಿಕೇಂದ್ರೀಕೃತವಾಗಬೇಕೆಂದು ನಾವು ಬಯಸುತ್ತೇವೆ. ಬೃಹತ್ ಕೈಗಾರಿಕೆಗಳಿಗಿಂತ ಉದ್ಯೋಗವನ್ನು ಉತ್ಪಾದಿಸುವ ಈ ಸಣ್ಣ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳು, ಗ್ರಾಮ ಕೈಗಾರಿಕೆಗಳಿಗೆ ಆದ್ಯತೆ ನೀಡಬೇಕು. ಅಲ್ಲದೆ, ಕೃಷಿಯೇತರ ಉದ್ದೇಶಗಳಿಗಾಗಿ ಬಳಸಬೇಕಾದ ಭೂಮಿ ಹೆಚ್ಚಾಗಿ ಸರ್ಕಾರಿ ಭೂಮಿ ಮತ್ತು ಪಾಳುಭೂಮಿಯಾಗಿರಬೇಕು ಮತ್ತು ಪ್ರಧಾನ ಕೃಷಿ ಭೂಮಿಯಲ್ಲ” ಎಂದು ಅಭಿಪ್ರಾಯಿಸಿದ್ದಾರೆ.

“ಆದ್ದರಿಂದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಅವರು ಜನರ ಅಭಿಪ್ರಾಯಗಳು ಮತ್ತು ಅಭಿವೃದ್ಧಿಯ ದೃಷ್ಟಿಕೋನಗಳನ್ನು ನಿಜವಾಗಿಯೂ ಅರಿತುಕೊಳ್ಳಬೇಕು. ಪ್ರಸ್ತಾವಿತ ಯೋಜನೆಯನ್ನು ರದ್ದುಗೊಳಿಸಬೇಕು. ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಜೀವಿಸುವ ಹಕ್ಕಿನ ಭಾಗವಾಗಿರುವ ಜೀವನೋಪಾಯವನ್ನು ಉಳಿಸಬೇಕು” ಎಂದು ಮೇಧಾ ಪಾಟ್ಕರ್ ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X