ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

Date:

Advertisements

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ವಕ್ತಾರನೊಬ್ಬನು ಎದೆಗೆ ಗುಂಡು ಹೊಡೆಯುತ್ತೇವೆ ಎಂದು ನೀಡಿದ ಕೊಲೆ ಬೆದರಿಕೆ ದೇಶದ ರಾಜಕೀಯ ವಲಯದ ಕ್ರೋಶ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವು ಆತಂಕಕಾರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದಿದ್ದಾರೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ‌ ನಿಂತು ತಮ್ಮ ವಿರೋಧಿಗಳ‌ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ ಎಂದಿದ್ದಾರೆ.

ಈ ಹಿಂದೆ ನನಗೆ ಮಾತ್ರವಲ್ಲ ನಾಡಿನ ಅನೇಕ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರಿಗೂ ಕೊಲೆ ಬೆದರಿಕೆ ಒಡ್ಡಿ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರಿ ನಂಬಿದ ಸಿದ್ಧಾಂತಕ್ಕೆ ಬೆನ್ನು ಹಾಕುವ ಜಾಯಮಾನ ನನ್ನದಲ್ಲ. ಒಂದಲ್ಲಾ ಒಂದು ದಿನ ನ್ಯಾಯದ ಎದುರು ಈ ಎಲ್ಲ ದುಷ್ಟರು ಮಂಡಿಯೂರುತ್ತಾರೆಂಬ ಭರವಸೆ ನನಗಿದೆ.

ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ರಾಹುಲ್ ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ ಎಂದು ಸಿಎಂ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು...

Download Eedina App Android / iOS

X