ಡಾ. ಐ.ಜೆ. ಮ್ಯಾಗೇರಿ ಅವರ ‘ಜೈಲ್‌ ಡೈರಿ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

Date:

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೆಎಎಸ್‌ ಅಧಿಕಾರಿ, ಸಾಹಿತಿ ಡಾ. ಎ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿ (ಕೈದಿಗಳ ನೈಜ ಕಥನ)ʼ ಕೃತಿ ಆಯ್ಕೆಯಾಗಿದೆ.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದ ಇಮಾಮಸಾಬ್‌ ಜೀವನಸಾಬ್‌ ಮ್ಯಾಗೇರಿ ಧಾರವಾಡದ ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದಿಂದ ಎಂ.ಎ. ಸ್ನಾತಕೋತ್ತರ ಪದವಿ ಪಡೆದು, ಹಂಪಿ ಕನ್ನಡ ವಿವಿಯಲ್ಲಿ ಎಂ.ಫಿಲ್. ಹಾಗೂ ‘ವಸಾಹತುಶಾಹಿ ಅನುಭವ ಹಾಗೂ ಕನ್ನಡ ಕಾದಂಬರಿಗಳು’ ವಿಷಯದ ಮೇಲೆ ಪಿಎಚ್‌ಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

2005ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ನಾಟಕ ಕಾರಾಗೃಹಗಳ ಇಲಾಖೆಯ ಸೇವೆಗೆ ಸೇರಿರುವ ಇವರು ಕರ್ನಾಟಕದ ಅನೇಕ ಕಾರಾಗೃಹಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆಯಲ್ಲಿದ್ದಾರೆ.

2014ರಲ್ಲಿ ಭಾರತ ಸರ್ಕಾರದಿಂದ ಇಂಗ್ಲೆಂಡ್ ಮತ್ತು ಸ್ಯಾಟಲ್ಯಾಂಡ್ ದೇಶಗಳಿಗೆ ಅಧ್ಯಯನ ಪ್ರವಾಸಕ್ಕೆ ಏಕೈಕ ಅಧಿಕಾರಿಯಾಗಿ ಆಯ್ಕೆಗೊಂಡು ಅಲ್ಲಿಯ ಕಾರಾಗೃಹಗಳ ಸುಧಾರಣೆ ಮತ್ತು ಅಪರಾಧಿಗಳ ಮನಃಪರಿವರ್ತನೆಯ ಕಾರ್ಯಕ್ರಮಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡು ಬಂಧಿಗಳ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ.

ಇವರ ಕರ್ತವ್ಯ ನಿಷ್ಠೆ ಮತ್ತು ಕಾರಾಗೃಹ ಆಡಳಿತದಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಗಾಗಿ 2021ರಲ್ಲಿ ಕರ್ನಾಟಕ ಸರ್ಕಾರದಿಂದ ಮುಖ್ಯಮಂತ್ರಿಗಳ ಚಿನ್ನದ ಪದಕ ದೊರೆತಿದೆ. ‘ಹಿಂಸಾಕಾರಣ’, ಇವರ ಇನ್ನೊಂದು ಪ್ರಕಟಿತ ಕೃತಿ. ಇವರ ಬರಹಗಳು ಬೆಂಗಳೂರು ಮತ್ತು ತುಮಕೂರು ವಿವಿಗಳ ಪದವಿ ತರಗತಿಗೆ ಪಠ್ಯವಾಗಿದೆ.

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ʼಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿʼಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ.

ಪ್ರಶಸ್ತಿಗೆ 22 ಕೃತಿಗಳು ಬಂದಿದ್ದು, ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು, ಲೇಖಕಿ ಮತ್ತು ಪ್ರಾಧ್ಯಾಪಕಿ ಶಮೀಮಾ ಕುತ್ತಾರ್‌ ಹಾಗೂ ಪತ್ರಕರ್ತ, ಸಾಹಿತಿ ಹಂಝ ಮಲಾರ್ ತೀರ್ಪುಗಾರರಾಗಿ ಸಹಕರಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 27ರಂದು ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು. ಹೆಚ್.‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...