ಎಸ್‌ಡಿಆರ್‌ಎಫ್, ಎಡಿಆರ್‌ಎಫ್‌ನಂತೆ ಕರ್ನಾಟಕಕ್ಕೆ ಬರ ಪರಿಹಾರ: ಸುಪ್ರೀಂಗೆ ಕೇಂದ್ರ ಮಾಹಿತಿ

Date:

Advertisements

ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಹಾಗೂ ಕೇಂದ್ರ ವಿಪತ್ತು ಪರಿಹಾರ ನಿಧಿಯ(ಎನ್‌ಡಿಆರ್‌ಎಫ್) ಸಂವಿಧಾನ ಹಾಗೂ ಮಾರ್ಗಸೂಚಿಯ ಅನುಗುಣವಾಗಿ ಕರ್ನಾಟಕಕ್ಕೆ ಬರ ಪರಿಹಾರದ ಹಣಕಾಸು ನೆರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

“ರಾಷ್ಟ್ರೀಯ ಕಾರ್ಯಾಕಾರಿ ಉಪ ಸಮಿತಿಯ ಶಿಫಾರಸ್ಸಿನ ಅನ್ವಯ ಎನ್‌ಡಿಆರ್‌ಎಫ್‌ ಹಾಗೂ ಐಎಂಸಿಟಿಯ ವರದಿಯಡಿ ನೆರವಿನ ಅಂಶಗಳು ಹಾಗೂ ಮಾನದಂಡದ ಆಧಾರದ ಮೇಲೆ ಸಾಕಷ್ಟು ಹೊಂದಾಣಿಕೆಯೊಂದಿಗೆ ಭಾರತ ಸರ್ಕಾರವು ಹಣಕಾಸು ನೆರವನ್ನು ಬಿಡುಗಡೆ ಮಾಡಿದೆ” ಎಂದು  ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದರು.

ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್,ಕೇಂದ್ರದಿಂದ 3454 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಪರಿಹಾರಕ್ಕೆ ರಾಜ್ಯವು ಅಫಿಡವಿಟ್‌ ಸಲ್ಲಿಸಲಿದೆ ಎಂದರು.

Advertisements

ಪ್ರಕರಣವು ಹಿರಿಯ ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಸಂದೀಪ್‌ ಮೆಹ್ತಾ ಅವರ ಪೀಠದ ಮುಂದೆ ಇಂದು ವಿಚಾರಣೆಗೆ ಬಂದಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬೇಸಿಗೆ ರಜೆಯ ನಂತರ ಜುಲೈನಲ್ಲಿ ನಡೆಸುವುದಾಗಿ ತಿಳಿಸಿತು.

ಕರ್ನಾಟಕ ಸರ್ಕಾರವು ಸೆ.13, 2023ಲ್ಲಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು,  ಬರದಿಂದಾಗಿ 48 ಲಕ್ಷ ಎಕ್ಟೇರ್‌ನಲ್ಲಿನ ಬೆಳೆ ಹಾಳಾಗಿದ್ದು, 35,162 ಕೋಟಿ ರೂ. ನಷ್ಟವುಂಟಾಗಿದೆ ಎಂದು ತಿಳಿಸಿದೆ.

ರಾಜ್ಯವು 18 ಸಾವಿರ ಕೋಟಿ ನೆರವು ನೀಡಬೇಕೆಂದು ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ 3454 ಕೋಟಿ ಮಾತ್ರ ನೆರವು ನೀಡಿದೆ ಎಂದು ಕಳೆದ ಬಾರಿಯ ವಿಚಾರಣೆಯಲ್ಲಿ ಕಪಿಲ್‌ ಸಿಬಲ್‌ ಕೋರ್ಟ್‌ಗೆ ಮನವರಿಕೆ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X