ಈದಿನ ಎಕ್ಸ್‌ಕ್ಲೂಸಿವ್‌ ಬ್ರೇಕಿಂಗ್‌ ನ್ಯೂಸ್‌: ಮುನಿರತ್ನ ವಿರುದ್ಧ ಚಾರ್ಜ್‌ಶೀಟ್‌ ಹಾಕಲು ಸ್ಪೀಕರ್‌ ಅನುಮತಿ!

Date:

ಹಲವು ಕ್ರಿಮಿನಲ್‌ ಆರೋಪಗಳಡಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್‌ ಆಗಿರುವ ಕೇಸೊಂದರಲ್ಲಿ ಅಭಿಯೋಜನೆಗೆ (ಪ್ರಾಸಿಕ್ಯೂಷನ್‌ಗೆ) ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಅವರು ಅನುಮತಿ ನೀಡಿದ್ದಾರೆ.

- Advertisement -

ಈ ಕುರಿತ ಸರ್ಕಾರಿ ಆದೇಶದ ಪ್ರತಿ ಈದಿನ ಡಾಟ್‌ ಕಾಮ್‌ಗೆ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಹನಿಟ್ರ್ಯಾಪ್‌ ನಡೆಸಲು ಎಚ್‌ ಐ ವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡಿದ್ದು, ದಲಿತರ ಮೇಲೆ ಜಾತಿನಿಂದನೆ, ಆಮಿಷವೊಡ್ಡಿ ವಿಕಾಸಸೌಧದಲ್ಲೇ ಅತ್ಯಾಚಾರ ಮಾಡಿದ್ದು ಒಳಗೊಂಡಂತೆ ಬಹಳ ಗಂಭೀರ ಆರೋಪಗಳ ಮೇಲೆ ಮುನಿರತ್ನ ವಿರುದ್ಧ ಎಫ್‌ ಐ ಆರ್‌ ದಾಖಲಾಗಿತ್ತು ಮತ್ತು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

ಆ ನಂತರ ಜಾಮೀನಿನ ಮೇಲೆ ಹೊರಬಂದು ಕಳೆದ ಬಜೆಟ್‌ ಅಧಿವೇಶನದಲ್ಲೂ ಭಾಗಿಯಾಗಿದ್ದರು. ಬಜೆಟ್‌ ಅಧಿವೇಶನದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಹನಿಟ್ರ್ಯಾಪ್‌ ನಡೆಯುತ್ತಿದೆಯೆಂದು ಹೇಳಿದಾಗ, ಸದನದಲ್ಲಿ ಭಾರೀ ಕೋಲಾಹಲ ಆಗಿತ್ತು. ಬಿಜೆಪಿ ಶಾಸಕರು ಈ ವಿಚಾರದಲ್ಲಿ ದೊಡ್ಡ ಪ್ರತಿಭಟನೆಯನ್ನೂ ನಡೆಸಿದ್ದರು.

ಅದೇ ಸಂದರ್ಭದಲ್ಲಿ ಅವರದ್ದೇ ಪಕ್ಷದ ಹನಿಟ್ರ್ಯಾಪ್‌ ಆರೋಪವನ್ನು ಹೊತ್ತಿದ್ದ ಶಾಸಕ ಮುನಿರತ್ನ ಸಹಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಪ್ರಶ್ನೆಗೊಳಗಾಗಿತ್ತು. ಸ್ವತಃ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ಬಳಿಯೇ ಎಚ್‌ ಐ ವಿ ಸೋಂಕಿತರನ್ನು ಕಳಿಸಿ, ಸೋಂಕು ತಗುಲಿಸಲು ಯತ್ನಿಸಿದ್ದರು ಎಂಬ ಆರೋಪವೂ ಮುನಿರತ್ನ ಅವರ ಮೇಲಿದೆ. ಸದನದಲ್ಲಿ ಅದೇ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ನೇತೃತ್ವದಲ್ಲೇ ನಡೆದ ಪ್ರತಿಭಟನೆಯಲ್ಲಿ ಮುನಿರತ್ನ ಅವರೂ ಇದ್ದರು.

1000193215

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ 153 ಎ(1)(ಎ)(ಬಿ) ಮತ್ತು 504 ಹಾಗೂ 506 ಕಲಂಗಳ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿತ್ತು. ಅದನ್ನು ಈಗ ನೀಡಲಾಗಿದ್ದು, ಈ ಕಾರಣದಿಂದ ಮುನಿರತ್ನ ಅವರ ಮೇಲೆ ಹೂಡಲಾಗಿದ್ದ ಕೇಸಿನ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...