ಕನ್ನಡ ಆಡಳಿತ ಭಾಷೆಯಾಗಿದ್ದರೂ ಇದು ಪಾಲನೆಯಾಗಿಲ್ಲ: ಸಿದ್ದರಾಮಯ್ಯ ಬೇಸರ

Date:

  • ‘ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ’
  • ‘ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸುವ ಅಗತ್ಯವಿದೆ’ 

ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಸಂಭ್ರಮ 50-ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ನಾವೆಲ್ಲರೂ ಕನ್ನಡಿಗರು, ಕರ್ನಾಟಕದ ಏಕೀಕರಣವಾದಾಗಿನಿಂದ ವಿವಿಧ ಭಾಷೆಗಳನ್ನು ಮಾತನಾಡುವ ಜನರು ಕನ್ನಡ ನಾಡಿನಲ್ಲಿ ನೆಲೆಸಿದ್ದಾರೆ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆ ಮಾತನಾಡುವುದನ್ನು ಕಲಿಯಬೇಕು. ತಮಿಳುನಾಡು, ಕೇರಳ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಭಾಷೆ ಕಲಿಯದೇ ಕನ್ನಡ ಮಾತನಾಡಿಕೊಂಡು ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡ ಬಾರದೇ ಇದ್ದರೂ ಬದುಕಬಹುದು. ಇದೇ ನಮ್ಮ ರಾಜ್ಯಕ್ಕೂ ಹಾಗೂ ಪಕ್ಕದ ರಾಜ್ಯಗಳಿಗೂ ಇರುವ ವ್ಯತ್ಯಾಸ” ಎಂದರು.

ಕನ್ನಡದ ವಾತಾವರಣ ನಿರ್ಮಿಸಲು ಸಾಧ್ಯವಾಗಿಲ್ಲ

“ಕರ್ನಾಟಕದ ಏಕೀಕರಣವಾಗಿ 68 ವರ್ಷ ಸಂದರೂ, ರಾಜ್ಯದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಿಸಲು ಸಾಧ್ಯವಾಗಿಲ್ಲ. ಕನ್ನಡಿಗರು ನಮ್ಮ ಭಾಷೆಯನ್ನು ಬೇರೆಯವರಿಗೆ ಕಲಿಸುವ ಬದಲು, ಅವರ ಭಾಷೆಯನ್ನೇ ನಾವು ಮೊದಲು ಕಲಿಯುತ್ತಿದ್ದೇವೆ. ಕನ್ನಡಿಗರ ಈ ವರ್ತನೆ ಭಾಷಾ ಬೆಳವಣಿಗೆ ಹಾಗೂ ನಾಡು, ನುಡಿ, ಸಂಸ್ಕೃತಿ ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎರಡು ದೇಶಗಳ ಸ್ಥಾಪನೆ- ಇಸ್ರೇಲ್ ಪ್ಯಾಲೆಸ್ತೀನಿ ಕದನಕ್ಕೆ ಕಾಯಂ ಪರಿಹಾರ

ಆಡಳಿತದಲ್ಲಿ ಕನ್ನಡ ಪಾಲನೆ 

“ನಮ್ಮಲ್ಲಿ ಇಂಗ್ಲಿಷ್‌ ವ್ಯಾಮೋಹವೂ ಹೆಚ್ಚಾಗಿದೆ. ನನ್ನ ಮಂತ್ರಿಮಂಡಲದ ಹಲವರು ಹಾಗೂ ವಿಶೇಷವಾಗಿ ಅಧಿಕಾರಿಗಳು ಕಡತಗಳಲ್ಲಿ ಇಂಗ್ಲಿಷ್ ನಲ್ಲಿಯೇ ಟಿಪ್ಪಣಿ ಬರೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ ಹಾಗೂ ಇತರೆ ರಾಜ್ಯಗಳಿಗೆ ಬರೆಯುವ ಸಂದರ್ಭದಲ್ಲಿ ಇಂಗ್ಲಿಷ್‌ ಬಳಸಬಹುದೇ ಹೊರತು, ಇನ್ನುಳಿದಂತೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಬಹಳ ವರ್ಷಗಳಿಂದ ಕನ್ನಡವನ್ನು ಆಡಳಿತ ಭಾಷೆಯಾಗಿದ್ದರೂ ಕೂಡ, ಇದು ಪಾಲನೆಯಾಗದಿರುವುದಕ್ಕೆ ನಿರ್ಲಕ್ಷ್ಯವೂ ಕಾರಣವಿರಬಹುದು” ಎಂದು ಹೇಳಿದರು.

ಹಿಂದಿನ ಸರ್ಕಾರ ಆಚರಿಸಬೇಕಿತ್ತು

ನವೆಂಬರ್ 01, 2023 ಕ್ಕೆ 50 ವರ್ಷಗಳು ತುಂಬುತ್ತದೆ. ವಾಸ್ತವವಾಗಿ ಕಳೆದ ವರ್ಷವೇ ಇದನ್ನು ಆಚರಿಸಬೇಕಿತ್ತು. ಆದರೆ ಹಿಂದಿನ ಸರ್ಕಾರದವರು ಮಾಡಿಲ್ಲ. ಈ ಬಾರಿಯ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇದೊಂದು ಮಹತ್ವದ ಘಟನೆ. ಇದನ್ನು ವಿಶೇಷವಾಗಿ ಆಚರಿಸದೇ ಹೋದರೆ ಲೋಪವಾಗುತ್ತದೆ ಎಂದು ತೀರ್ಮಾನಿಸಿ, ಬಜೆಟ್ ನಲ್ಲಿ ಘೋಷಣೆ ಮಾಡಿ 2023 ನವೆಂಬರ್ 1 ರಿಂದ 2024 ನವೆಂಬರ್ 1 ರವರೆಗೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸಲಾಗುತ್ತಿದೆ.

ಲಾಂಛನದ ವಿನ್ಯಾಸಕ್ಕೆ ಮೆಚ್ಚುಗೆ

ಕರ್ನಾಟಕ ಸಂಭ್ರಮ- 50 ಲಾಂಛನವನ್ನು ಬಿಡುಗಡೆ ಮಾಡಿದ್ದು, ಅದನ್ನು ವಿನ್ಯಾಸಗೊಳಿಸಿದ ರವಿರಾಜ್ ಜಿ.ಹುಲಗೂರು ಅವರನ್ನು ಅಭಿನಂದಿಸಿದರು. ಲಾಂಚನದ ವಿನ್ಯಾಸ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...