ರೈತ ವಿರೋಧಿ ಕಾಯ್ದೆ: ಸರ್ಕಾರದ ನಿಲುವು ಸ್ಪಷ್ಟಪಡಿಸಲು ರೈತ ಸಂಘಟನೆಗಳಿಂದ ಸಿಎಂಗೆ ತುರ್ತು ಬಹಿರಂಗ ಪತ್ರ

Date:

ಬಿಜೆಪಿಯ ರೈತ ವಿರೋಧಿ ಕಾಯ್ದೆಯನ್ನು ರದ್ದು ಮಾಡುವುದಾಗಿ ಹೇಳಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದೇ ಕಾಯ್ದೆಯನ್ನು ಮುಂದುವರೆಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿದೆ. ಈ ನಿಟ್ಟಿನಲ್ಲಿ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರವನ್ನು ಬರೆದಿದ್ದು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವಂತೆ ತಿಳಿಸಿದ್ದಾರೆ.

- Advertisement -

ನಿನ್ನೆ ಪ್ರಜಾವಾಣಿ ಪತ್ರಿಕೆಯ ಮುಖಪುಟದಲ್ಲಿ ‘ರೈತರ ಆದಾಯಕ್ಕೆ ಹೆಚ್ಚಳ: ಹಳೆ ಕಾಯ್ದೆಗೆ ಜೋತುಬಿದ್ದ ಸರ್ಕಾರ’ ಎಂಬ ಶೀರ್ಷಿಕೆಯಲ್ಲಿ ಲೇಖನವೊಂದು ಪ್ರಕಟವಾಗಿತ್ತು. ಈ ಲೇಖನವನ್ನು ಓದಿ ನಾವು ಆಘಾತಕ್ಕೆ ಒಳಗಾಗಿದ್ದೇವೆ. ರೈತರ ಆದಾಯ ಹೆಚ್ಚಿಸುವ ಹೆಸರಿನಲ್ಲಿ ಬಿಜೆಪಿ ಸರ್ಕಾರ ರೂಪಿಸಿದ ನೀತಿಗಳನ್ನೇ ಯಥಾವತ್ ಜಾರಿಗೊಳಿಸುವ ಮಾರ್ಗಸೂಚಿಯನ್ನೇ ಕಾಂಗ್ರೆಸ್ ಸರ್ಕಾರವೂ ಪಾಲಿಸುತ್ತಿರುವ ಸ್ಪಷ್ಟ ಸಾಕ್ಷ್ಯ ಇದರಲ್ಲಿದೆ ಎಂದು ಕರ್ನಾಟಕ ರೈತ ಸಂಘಟನೆಗಳು ಬಹಿರಂಗ ಪತ್ರದಲ್ಲಿ ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ಫೆ. 5ರಂದು ಕೇಂದ್ರ ಬಜೆಟ್ ಪ್ರತಿ ಸುಟ್ಟು ಐಕ್ಯ ಪ್ರತಿಭಟನೆ; ಕರೆ ನೀಡಿದ ರೈತ ಸಂಘಟನೆಗಳು

“ಇತ್ತೀಚೆಗೆ ಬೆಲೆ ಆಯೋಗದ ಸಭೆ ನಡೆದಿದೆ. ಅದರಲ್ಲೂ ಇವುಗಳನ್ನೇ ಮಾನದಂಡವನ್ನಾಗಿಸಲಾಗಿದೆ. ಚರ್ಚೆ ನಡೆಸಲಾಗಿದೆ. ಸರ್ಕಾರದ ನಿಲುವು ಇದೇ ಆಗಿದ್ದರೆ ಇದು ರೈತಕುಲಕ್ಕೆ ಮಾಡುತ್ತಿರುವ ಮಹಾದ್ರೋಹವಾಗಿದೆ. ನಾವಿದನ್ನು ಉಗ್ರವಾಗಿ ಪ್ರತಿಭಟಿಸಿ ಬೀದಿಗಿಳಿಯಬೇಕಾಗುತ್ತದೆ. ಮುಂದುವರೆಯುವ ಮುನ್ನ ನಿಮ್ಮಿಂದ ಸ್ಪಷ್ಟನೆ ಪಡೆಯಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಿಳಿಸಿವೆ.

ಬಹಿರಂಗ ಪತ್ರದಲ್ಲಿ ಬೇರೇನಿದೆ?

ಬಿಜೆಪಿಯು ರೈತರ ಆದಾಯವನ್ನು ದ್ವಿಗುಣಗೊಳಿಸುವ ಬೋಗಸ್ ಮಾತುಗಳನ್ನು ಆಡುತ್ತಾ ಕೃಷಿ ಭೂಮಿಯನ್ನು, ಕೃಷಿ ಉತ್ಪನ್ನಗಳ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರವನ್ನು ಮಾಡುತ್ತಿದೆ. ಅದರ ವಿರುದ್ಧವಾಗಿ ದೇಶದ 562 ರೈತ ಸಂಘಟನೆಗಳು ಒಗ್ಗೂಡಿ ಒಂದು ವರ್ಷಕ್ಕೂ ಹೆಚ್ಚು ಕಾಲ ಐತಿಹಾಸಿಕ ದೆಹಲಿ ರೈತ ಹೋರಾಟವನ್ನು ನಡೆಸಿತ್ತು. ಈ ಹೋರಾಟದಲ್ಲಿ ಏಳು ನೂರಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದರು.

ಕಡೆಗೂ ಬಗ್ಗಿದ ಕೇಂದ್ರ ಸರ್ಕಾರ ಅದನ್ನು ವಾಪಾಸ್ ತೆಗೆದುಕೊಂಡಿತು. ಲಿಖಿತ ಭರವಸೆಗಳನ್ನು ರೈತರಿಗೆ ನೀಡಿತು. ಆದರೆ ಯಾವೊಂದು ಭರವಸೆಯನ್ನೂ ಈಡೇರಿಸಲಿಲ್ಲ. ಬದಲಿಗೆ ತಾನಿದ್ದ ರಾಜ್ಯ ಸರ್ಕಾರಗಳಲ್ಲಿ ಅವನ್ನು ಜಾರಿ ಮಾಡಿಸುವ ಕೆಲಸ ಮುಂದುವರೆಸಿತು. ಅದರ ಭಾಗವಾಗಿಯೇ ಕರ್ನಾಟಕದಲ್ಲಿಯೂ ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ಮಾಡಿತು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷ ಇದನ್ನು ವಿರೋಧಿಸಿತು.

ಇದನ್ನು ಓದಿದ್ದೀರಾ? ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಬೇಕು: ರೈತ ಸಂಘದಿಂದ ಸಿಎಂ, ಸಚಿವರಿಗೆ ಮನವಿ

ರೈತರು ಬೀದಿಗಿಳಿದಾಗ ಕಾಂಗ್ರೆಸ್ ನಾಯಕರು ರೈತರೊಂದಿಗೆ ಕೂತರು ಹೋರಾಟ ಮಾಡೋಣ ಎಂದರು. 2023 ರ ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ‘ಬಿಜೆಪಿ ಸರ್ಕಾರ ತಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವ ರೈತರ ಮೇಲೆ ಹಾಕಿರುವ ರಾಜಕೀಯ ಪ್ರೇರಿತ ಕೇಸುಗಳನ್ನು ತೆಗೆಯುವ, ಎಂಎಸ್‌ಪಿಯನ್ನು ಜಾರಿ ಮಾಡುವ, ಬಡ್ಡಿ ರಹಿತ ಸಾಲದ ಪ್ರಮಾಣ ಹೆಚ್ಚಿಸುವ, ಹೀಗೆ ಮುಂತಾದ ಅನೇಕ ವಾಗ್ದಾನಗಳನ್ನು ಕಾಂಗ್ರೆಸ್ ಮಾಡಿತು. ಆದರೆ ಈ ಯಾವ ಭರವಸೆಗಳನ್ನೂ ಸರ್ಕಾರ ಈಡೇರಿಸಿಲ್ಲ ಎಂದು ರೈತ ಸಂಘಟನೆಗಳು ಬಹಿರಂಗ ಪತ್ರದಲ್ಲಿ ಉಲ್ಲೇಖಿಸಿವೆ.

ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾಯ್ದೆಗಳನ್ನು ಹಾಗೇ ಮುಂದುವರೆಸಿದೆ. ಬಿಜೆಪಿ ನೇಮಿಸಿದ್ದ ಬೆಲೆ ಆಯೋಗವನ್ನೇ ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿದೆ. ಬಿಜೆಪಿ ನೀಡಿದ ಮಾರ್ಗ ಸೂಚಿಗಳನ್ನೇ ಕಾಂಗ್ರೆಸ್ ಸರ್ಕಾರವು ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮಾಡಿದ [ರೈತರ ಹೋರಾಟದಿಂದಾಗಿ ಹಿಂದಕ್ಕೂ, ತೆಗೆದುಕೊಂಡಿದ್ದ), ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ತಿದ್ದುಪಡಿ ಕಾಯ್ದೆಗಳನ್ನೇ ಉಲ್ಲೇಖಿಸಿ ಇವನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಏನೆಲ್ಲಾ ಮಾಡಬೇಕು ಎಂದು ಅಧ್ಯಯನ ಮಾಡಿ ಶಿಫಾರಸು ಮಾಡಿ ಎಂದಿದ್ದೀರಿ, ಎಂಎಸ್‌ಪಿ ಜಾರಿ ಮಾಡುವ, ಸರ್ಕಾರ ರೈತರ ಸಹಾಯಕ್ಕೆ ಬರುವ ಒಂದೇ ಒಂದು ಮಾತೂ ಸಹ ಇದರಲ್ಲಿ ಇಲ್ಲ. ಇದು ನಮಗೆ ಅಪಾರ ನೋವು ಮತ್ತು ಆಘಾತ ತಂದಿದೆ. ಇದಕ್ಕೆ ಕೂಡಲೇ ಸರ್ಕಾರ ಉತ್ತರ ನೀಡಲೇಬೇಕಿದೆ ಎಂದು ಕರ್ನಾಟಕ ರೈತ ಸಂಘಟನೆಗಳು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ಕರ್ನಾಟಕದ 85% ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ಅಳತೆಯಲ್ಲಿ ಮೋಸವಾಗುತ್ತಿದೆ. ಇದನ್ನು ತಡೆಗಟ್ಟಲು...

ಪೆಟ್ರೋಲ್ ಹಾಕಿಸುವ ಮುನ್ನ ಎಚ್ಚರ: ಶೇ 85ಕ್ಕೂ ಹೆಚ್ಚು ಬಂಕ್‌ಗಳಲ್ಲಿ ಇಂಧನ ಕಡಿತ; ರಾಜ್ಯ ಸರ್ಕಾರದ ತಪಾಸಣೆಯಲ್ಲಿ ಬಟಾಬಯಲು

ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ವಿತರಿಸುವ ಶೇ 85ಕ್ಕೂ...