ಸಿ ಟಿ ರವಿಗೆ ಸ್ವಾಗತಿಸಿದ್ದ 7 ಆ್ಯಂಬುಲೆನ್ಸ್​ ವಿರುದ್ಧ ಎಫ್‌ಐಆರ್

Date:

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್​ಗಳನ್ನು ಬಳಕೆ ಮಾಡಲಾಗಿದೆ.

- Advertisement -

ಸಿ ಟಿ ರವಿ ಸ್ವಾಗತಕ್ಕೆ ಆ್ಯಂಬುಲೆನ್ಸ್​ಗಳು ಸೈರನ್ ಹಾಕಿಕೊಂಡು ಬಂದಿವೆ. ಈ ಸಂಬಂಧ ಎಫ್​ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆ್ಯಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ರೋಗಿಗಳಲ್ಲಿದೆ ಸೈರನ್ ಹಾಕಿಕೊಂಡು ಹಾಗೂ ಟಾಪ್​ನಲ್ಲಿ ಲೈಟ್ ಹಾಕಿಕೊಂಡು ಬಂದಿದ್ದ 7 ಆ್ಯಂಬ್ಯುಲೆನ್ಸ್ ಚಾಲಕ, ಮಾಲೀಕರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಶಾಂತಿ ಭಂಗ ಆರೋಪದಡಿ ಆ್ಯಂಬುಲೆನ್ಸ್ ಮಾಲೀಕ, ಚಾಲಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಬಂಧನದಿಂದ ಮುಕ್ತವಾದ ಬಳಿಕ ಸಿ ಟಿ ರವಿ ಅವರು ನಿನ್ನೆ(ಡಿಸೆಂಬರ್ 21) ಮಧ್ಯರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ಸಿ ಟಿ ರವಿ ಅವರನ್ನು ಭರ್ಜರಿ ಸ್ವಾಗತ ಕೋರಿದ್ದರು. ರಸ್ತೆಯುದ್ದಕ್ಕೂ ಜೈಕಾರ ಹಾಕಿ ಹೂಮಳೆಗೈದಿದ್ದರು.ಇನ್ನು ಈ ಸ್ವಾಗತದ ಮೆರವಣಿಗೆಯಲ್ಲಿ 7 ಆ್ಯಂಬುಲೆನ್ಸ್​ಗಳು ಭಾಗಿಯಾಗಿದ್ದವು. ಚಿಕ್ಕಮಗಳೂರು ನಗರದ ಹಿರೇಮಗಳೂರಿನಿಂದ ಸಿ ಟಿ ರವಿ ನಿವಾಸದವರೆಗೂ ಜೋರಾಗಿ ಸೈರನ್ ಹಾಕಿಕೊಂಡು ಬಂದಿದ್ದವು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದ ಆರೋಪದ ಮೇಲೆ ಸಿ ಟಿ ರವಿ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಹೈಕೋರ್ಟ್​ ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...