ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

Date:

Advertisements

ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ. ನಿನ್ನೆ (ಡಿಸೆಂಬರ್ 11) ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ವಿಭಾಗೀಯ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ.

ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್‌ ಲಿಂಗಣ್ಣ ಎನ್ನುವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು ಪೀಠ ಪುರಸ್ಕರಿಸಿದೆ. ಈ ಪ್ರಕರಣದ ತೀರ್ಪನ್ನು ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ನ್ಯಾಯಮೂರ್ತಿಗಳು ಬರೆದಿದ್ದಾರೆ. ತೀರ್ಪಿನ ಕಾರ್ಯಕಾರಿ ಭಾಗವನ್ನು ನ್ಯಾ. ದೀಕ್ಷಿತ್‌ ಅವರು ಕನ್ನಡದಲ್ಲಿ ಓದುವ ಮೂಲಕ ಗಮನಸೆಳೆದರು.

ಕನ್ನಡದಲ್ಲೇ ತೀರ್ಪನ್ನು ಓದಿದ ನಂತರ ನ್ಯಾ. ದೀಕ್ಷಿತ್‌ ಅವರು, ಇಂಗ್ಲೆಂಡ್​ನಲ್ಲಿ 1730ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. 1730ರಿಂದ ಅವರ ಮಾತೃಭಾಷೆ ಇಂಗ್ಲಿಷ್‌​ನಲ್ಲೇ ಕಲಾಪ ಆರಂಭಿಸಿದ್ದರು. ಆದರೆ, ಜನಸಾಮಾನ್ಯರಿಗೆ ಕೋರ್ಟ್​ಗಳ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ. ಕನ್ನಡ ಅವಸಾನವಾಗಬಾರದೆಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಮೊದಲಿಗೆ ಇಂಗ್ಲಿಷ್‌ನಲ್ಲಿ ತೀರ್ಪು ಓದಿದ ನ್ಯಾ. ದೀಕ್ಷಿತ್‌ ಅವರು ಆನಂತರ ಕನ್ನಡದಲ್ಲಿ ಓದಿದರು. ಮೇಲ್ಕಾಣಿಸಿದ ಕಾರಣಗಳಿಂದಾಗಿ ಈ ಮೇಲ್ಮನವಿಯನ್ನು ಪುರಸ್ಕರಿಸಲಾಗಿದೆ. ಏಕಸದಸ್ಯ ನ್ಯಾಯಾಧೀಶರ ಪ್ರಶ್ನಿತ ತೀರ್ಪು ಮತ್ತು ಆದೇಶವನ್ನು ರದ್ದುಗೊಳಿಸಲಾಗಿದೆ. ಪ್ರತಿವಾದಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ತತ್ಪರಿಣಾಮವಾಗಿ ಟಿಒಎಸ್‌ ಸಂಖ್ಯೆ 1/2023ರಲ್ಲಿ ಮೇಲ್ಮನವಿದಾರರ ದಾವೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಅದನ್ನು ಕಾನೂನು ರೀತ್ಯಾ ವಿಚಾರಣೆ ಮತ್ತು ವಿಲೇವಾರಿ ಮಾಡಬೇಕಾಗುತ್ತದೆ. ಯಾರೂ ವೆಚ್ಚವನ್ನು ಭರಿಸುವಂತಿಲ್ಲ ಎಂದರು.

ಆನಂತರ ವಕೀಲರೊಬ್ಬರು ಇದು ಸಾಮಾನ್ಯ ಜನರಿಗೆ ಅರ್ಥವಾಗುತ್ತದೆ. ನ್ಯಾಯಮೂರ್ತಿಗಳ ಈ ತೀರ್ಪು ಇತರ ನ್ಯಾಯಮೂರ್ತಿಗಳಿಗೂ ಉತ್ತಮ ಸಂದೇಶ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ನ್ಯಾ. ದೀಕ್ಷಿತ್‌ ಅವರು ಹೌದು, ಸಾಮಾನ್ಯ ಜನರಿಗೆ ಅರ್ಥವಾಗಬೇಕು. ಇಂಗ್ಲಿಷ್‌ ಅಥವಾ ಅವರಿಗೆ ತಿಳಿಯದ ಭಾಷೆಯಲ್ಲಿ ಹೇಳಿದರೆ ಆಗದು. ನಾವು ನಮ್ಮ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಈ ಹಿಂದೆ ನ್ಯಾ. ಅರಳಿ ನಾಗರಾಜ್‌ ಅವರು ಸಹ ಕನ್ನಡದಲ್ಲಿಯೇ ತೀರ್ಪು ನೀಡುವ ಮೂಲಕ ನಾಡಿನ ಗಮನ ಸೆಳೆದಿದ್ದರು. ಆದರೆ, ಅವರ ಕನ್ನಡ ತೀರ್ಪು ಇಂಗ್ಲಿಷ್‌ ತೀರ್ಪಿನ ಅನುವಾದವಾಗಿತ್ತು. ಎರಡೂ ತೀರ್ಪುಗಳನ್ನು ಮೂಲ ತೀರ್ಪೆಂದು ಪರಿಗಣಿಸಬೇಕೆಂದು ಅವರು ಆ ವೇಳೆ ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X