ಕೃಷಿ ಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

Date:

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

- Advertisement -

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಿ. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಸಂಪೂರ್ಣವಾಗಿ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಕೃಷಿ ವಿವಿಗಳಿಗೆ ಕರೆ ನೀಡಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಇವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಸಿಎಂ ಸೂಚಿಸಿದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ ಎಂದರು.

ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದರು.

ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ 90 ರಷ್ಟು ಪ್ರಗತಿ ಪರಿಹಾರ ವರದಿ ನೀಡಿರುವುದಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...