ಆರ್ಥಿಕ ಅಪರಾಧದ ಕಂಪನಿಗಳಿಗೆ ಸರ್ಕಾರ ಬ್ರ್ಯಾಂಡ್ ಅಂಬಾಸಿಡರ್: ಸಂಸದ ಗೋವಿಂದ ಕಾರಜೋಳ ಟೀಕೆ

Date:

Advertisements

ಆರ್ಥಿಕ ಅಪರಾಧವಿರುವ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಮಾತನಾಡಿದ ಅವರು, “ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸತ್ತಿದ್ದು, ಈ ದುರ್ಘಟನೆಗೆ ಸಿದ್ದರಾಮಯ್ಯನವರ ಸರ್ಕಾರ ನೇರ ಹೊಣೆ” ಎಂದು ಆರೋಪಿಸಿದರು.

“ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು. ಹಿಂದಿನ ಸರಕಾರ ಈ ಆರ್ಥಿಕ ಅಪರಾಧಿ ಕಂಪನಿಗಳ ಸಂಭ್ರಮಾಚಾರಣೆಗೆ ಮುಂದಾಗಿಲ್ಲ ಹಾಗೂ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿಲ್ಲ. ಆದರೆ, ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವಂತದ್ದು ಸಿದ್ದರಾಮಯ್ಯನವರ ಸರ್ಕಾರ. ಕಾಲ್ತುಳಿತ ದುರಂತಕ್ಕೆ ನೇರವಾಗಿ ಕರ್ನಾಟಕ ಸರ್ಕಾರವೇ ಹೊಣೆ” ಎಂದು ದೂರಿದರು.

Advertisements

“ದೇಶದ ಇಬ್ಬರು ಆರ್ಥಿಕ ಅಪರಾಧಿಗಳಿಗೆ ಸಂಬಂಧಿಸಿದ ಕಂಪನಿಗಳಲ್ಲಿ ಒಂದನೆಯದ್ದು ಆರ್‌ಸಿಬಿ. ಇದು ವಿಸ್ಕಿ ಮಾರಾಟಕ್ಕಾಗಿ ಹುಟ್ಟಿಕೊಂಡ ವಿಜಯ್ ಮಲ್ಯರವರ ಒಂದು ಕಂಪನಿ. ಎರಡನೆಯದ್ದು ‘ಐಪಿಎಲ್’. ಇದು ಲಲಿತ್ ಮೋದಿಯವರದ್ದು. ಇವರು ಕೂಡ ದೇಶದ ಆರ್ಥಿಕ ಅಪರಾಧಿ. ಇಬ್ಬರು ಆರ್ಥಿಕ ಅಪರಾಧಿಗಳು ಅಪರಾಧವನ್ನು ಮಾಡಿ ದೇಶದ ಖಜಾನೆಗೆ ಕನ್ನ ಹಾಕಿ ದೇಶ ಬಿಟ್ಟು ಹೋದವರು” ಎಂದು ಟೀಕಿಸಿದರು.

“ಯಾವ ಕಾರಣಕ್ಕಾಗಿ ವಿಜಯ ಮಲ್ಯ ಅವರ ಆರ್.ಸಿ.ಬಿ. ಕಂಪನಿ ಮತ್ತು ಲಲಿತ್ ಮೋದಿಯವರ ಐಪಿಎಲ್ ಕಂಪನಿಗೆ ರಾಜ್ಯ ಸರ್ಕಾರ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೀರಿ ಎಂಬುದನ್ನು ಈ ದೇಶದ ಜನತೆ ಮತ್ತ ನಾಡಿನ ಜನತೆ ತಿಳಿಸಬೇಕಾಗಿತ್ತು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X