Breaking News | ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ

Date:

ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ.

- Advertisement -

ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ವಿಧೇಯಕಕ್ಕೆ ಸಹಿ ಹಾಕದೆ ಬಾಕಿಯುಳಿಸಿಕೊಂಡಿದ್ದರು. ಆದರೆ, ಇಂದು (ಫೆಬ್ರವರಿ 26) ದಲಿತ ಸಮುದಾಯದ ಸಚಿವರು ರಾಜ್ಯಪಾಲರನ್ನು ಭೇಟಿ ಮಾಡಿ, ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಬಗ್ಗೆ ಪ್ರಸ್ತಾಪಿಸಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರು ಪರಿಶಿಷ್ಟ ಜಾತಿಗಳ ಮೀಸಲಾತಿ ವಿಧೇಯಕಕ್ಕೆ ಅನುಮೋದನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕರ್ನಾಟಕ ಅನುಸೂಚಿತ ಜಾತಿಗಳ ಉಪವರ್ಗೀಕರಣ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅಂಕಿತ ಹಾಕಲು ಈ ಹಿಂದೆ ನಿರಾಕರಿಸಿದ್ದು, ಹಲವು ಸ್ಪಷ್ಟನೆಗಳನ್ನು ಕೋರಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಇದರಿಂದಾಗಿ ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿಯ ಆಶಯಕ್ಕೆ ತಾತ್ಕಾಲಿಕ ಧಕ್ಕೆ ಉಂಟಾಗಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸಿನಂತೆ ಶೇ. 6, 6 ಮತ್ತು 5ರ ಅನುಪಾತದಲ್ಲಿ ಕೋಟಾ ನಿಗದಿಪಡಿಸಲಾಗಿತ್ತು, ಆದರೆ ರಾಜ್ಯಪಾಲರು ಜನವರಿ 9 ರಂದೇ ಈ ಕಡತವನ್ನು ವಾಪಸ್ ಕಳುಹಿಸಿದ್ದರು.

ಇದನ್ನು ಓದಿದ್ದೀರಾ? ಐಟಿ ಸಾಮ್ರಾಜ್ಯದಲ್ಲಿ ‘ಎಐ’ ಭೂಕಂಪ: ಭಾರತಕ್ಕೆ ಕಾದಿವೆಯೇ ಕರಾಳ ದಿನಗಳು?

ಇದೇ ಮಾರ್ಚ್ 6ರರಂದು ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು (ಫೆಬ್ರವರಿ 26) ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಚಿವರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಹಾಗೂ ಒಳಮೀಸಲಾತಿ ಜಾರಿ ಕುರಿತು ಗಂಭೀರ ಚರ್ಚೆ ನಡೆಸಲಾಯಿತು. ಒಳಮೀಸಲಾತಿ ವಿಧೇಯಕಕ್ಕೆ ರಾಜಭವನದಲ್ಲಿ ತಡೆ ಉಂಟಾಗಿರುವ ಬಗ್ಗೆ ಚರ್ಚೆ ನಡೆದಿದ್ದು, ಅಂತಿಮವಾಗಿ ಒಳಮೀಸಲಾತಿ ವಿಧೇಯಕಕ್ಕೆ ಕೂಡಲೇ ಅಂಕಿತ ಹಾಕುವಂತೆ ಕೋರಲು ರಾಜ್ಯಪಾಲರ ಬಳಿ ಸಚಿವರ ನಿಯೋಗ ತೆರಳಲು ನಿರ್ಧರಿಸಲಾಗಿತ್ತು.

ಅದರಂತೆ ದಲಿತ ಸಮಯದಾಯದ ಸಚಿವರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಖಾಲಿ ಹುದ್ದೆ ನೇಮಕಾತಿಗೆ ತೊಂದರೆಯಾಗುತ್ತಿದೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿರುವ ಬಗ್ಗೆಯೂ ಪ್ರಸ್ತಾಪಿಸಿ ಒಳಮೀಸಲಾತಿ ವಿಧೇಯಕಕ್ಕೆ ಸಹಿ ಹಾಕುವಂತೆ ಮಾನವಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು, ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ಸಹಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...