ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಎಚ್ ಕೆ ಪಾಟೀಲ

Date:

ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಮಾನ್ಯ ಘನತೆವೆತ್ತ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ಸೆ.9 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ ಅವರು ಇಂದು ಗದಗನಲ್ಲಿ ಮಾಧ್ಯಮಗೊಷ್ಠಿಯಲ್ಲಿ ತಿಳಿಸಿದರು.

- Advertisement -

ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡು ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಒಪ್ಪಿಗೆ ಪಡೆದು ಇಂದು ಅಧಿಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಆಸ್ತಿಯನ್ನು ಗುರುತಿಸಿ, ಅಂತಹ ಆಸ್ತಿಯನ್ನು ಜಪ್ತಿ ಮಾಡಲು ಸರ್ಕಾರಕ್ಕೆ ಅಧಿಕಾರ ದೊರಕಿದೆ. ಅಕ್ರಮ ಗಣಿಗಾರಿಕೆ ಕುರಿತು ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಗಿ ನನ್ನ ಅಧ್ಯಕ್ಷತೆಯಲ್ಲಿ ಜು.5ರಂದು ಸಚಿವ ಸಂಪುಟದ ಉಪಸಮಿತಿ ರಚನೆಯಾಗಿತ್ತು. ಈ ಸಮಿತಿಯು ಆ.8 ರಂದು ಮಾನ್ಯ ಸಚಿವ ಸಂಪುಟಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಜೊತೆಗೆ ಕರಡು ಮಸೂದೆಯನ್ನು ಸಹ ಸಚಿವ ಸಂಪುಟಕ್ಕೆ ಮಂಡಿಸಿತ್ತು. ಈ ಮಸೂದೆಯೊಂದಿಗೆ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಸಚಿವ ಸಂಪುಟವು ಸರ್ವಾನುಮತದಿಂದ ಅಂಗೀಕರಿಸಿ, ಅಕ್ರಮ ಗಣಿಗಾರಿಕೆ ವಿರುದ್ಧ ಅತ್ಯಂತ ಕಠಿಣಾತಿ-ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ರಾಜ್ಯ ಸಚಿವ ಸಂಪುಟದ ನಿರ್ಣಯದಂತೆ ಆ.18 ರಂದು ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಆ.21 ರಂದು ವಿಧಾನಸಭೆಯಲ್ಲಿ ಮತ್ತು ಆ.22 ರಂದು ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕರಿಸಲಾಯಿತು.

ಈ ವಸೂಲಾತಿ ಆಯುಕ್ತರ ನೇಮಕದಿಂದಾಗಿ ರಾಜ್ಯದಲ್ಲಿ ಆರ್ಥಿಕ ಶಿಸ್ತು ತರಲು ಸೂಕ್ತವಾದಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಇಂದು ಗದಗನಲ್ಲಿ ಪ್ರಕಟಿಸಿದ್ದಾರೆ.

ರಾಜ್ಯಪಾಲರು ಸೆ.9 ರಂದು ಈ ಐತಿಹಾಸಿಕ ಮಸೂದೆಗೆ ಅಂಕಿತ ಹಾಕುವ ಮೂಲಕ ಸರ್ಕಾರದ ಬದ್ದತೆಗೆ ಮುದ್ರೆ ಒತ್ತಿದ್ದಾರೆ ಎಂದು ಹೇಳಿದರು. ಕನ್ನಡಿಗರ ಆಸ್ತಿ ಕನ್ನಡಿಗರಿಗೆ ಮರಳಿಸುವ ಉದ್ದೇಶ ಈಡೇರಿದೆ. ನಮ್ಮ ಪಕ್ಷ ಮತ್ತು ಸರ್ಕಾರ ಈ ಮೊದಲು ಕನ್ನಡ ನಾಡಿನ ಜನತೆಗೆ ನೀಡಿದ ವಾಗ್ದಾನವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಗಣಿ ಹಗರಣದ ಕಾರಣ ಕಳೆದ ಒಂದೂವರೆ ತಿಂಗಳಿನಿಂದ ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಮಾರ್ಗದರ್ಶನದಲ್ಲಿ ಹಲವಾರು ಕ್ರಮಗಳನ್ನು ಸರ್ಕಾರ ಕೈಗೊಳ್ಳಲು ಪ್ರಾರಂಭಿಸಿತ್ತು ಎಂದು ಸಚಿವರು ನೆನಪಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...