ರಾಜ್ಯದಲ್ಲಿ ಇಂದೂ ಭಾರಿ ಮಳೆ; ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

Date:

Advertisements

ತಮಿಳುನಾಡು, ಆಂಧ್ರದಲ್ಲಿ ಉಂಟಾಗಿರುವ ‘ಫೆಂಜಲ್’ ಚಂಡಮಾರುತದ ಪರಿಣಾಮ ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನ ವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳ ವಿವಿಧೆಡೆಯೂ ಜೋರು ಮಳೆ ಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಆಯಾ ಜಿಲ್ಲಾಡಳಿತಗಳಿಂದ ಅಂಗನವಾಡಿ ಕೇಂದ್ರಗಳು, ಶಾಲೆ– ಪಿಯು‌ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಡಿ.3 ರಂದು ಕೂಡ ರಜೆ ಘೋಷಿಸಲಾಗಿದೆ.

Advertisements

ಸೋಮವಾರ ರಾತ್ರಿ 10 ಗಂಟೆಯ ನಂತರ, ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಯಿತು. ಗುಡುಗು ಮತ್ತು ಸಿಡಿಲಿನೊಂದಿಗೆ ಬಿರುಸಾಗಿ ಸುರಿಯಿತು. ರಾತ್ರಿ ಮಳೆ ಅಧಿಕವಾಗಿದ್ದರಿಂದ ರಸ್ತೆಯಲ್ಲಿ ನೀರು ನಿಂತ ಪ್ರಮಾಣ ಹೆಚ್ಚಾಗಿತ್ತು. ಗುಂಡಿಗಳಲ್ಲಿ ನೀರು ನಿಂತಿದ್ದನ್ನು ಗ್ರಹಿಸದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿದರು.

ಈ ಸುದ್ದಿ ಓದಿದ್ದೀರಾ? ನಿವೃತ್ತ ನ್ಯಾ. ಡಿ ವೈ ಚಂದ್ರಚೂಡ್ ಬಿಜೆಪಿ ಕೈಗೊಂಬೆಯಾಗಿದ್ದರೆ?

ಹಗಲಿನ ವೇಳೆ ಹಲವು ಕಡೆ ಸಾಧಾರಣ ಮಳೆಯಾಯಿತು. ಮಳೆ ಮಳೆ ಕಡಿಮೆಯಿದ್ದರೂ, ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರನ್ನು ಪರದಾಡಿಸಿತು. ಚರಂಡಿಗಳಲ್ಲಿ ಸರಾಗವಾಗಿ ನೀರು ಹರಿಯದೆ, ರಸ್ತೆ ಮೇಲಿದ್ದ ನೀರಿನಿಂದ ದ್ವಿಚಕ್ರ ವಾಹನ ಸವಾರರು ಸಂಕಷ್ಟ ಅನುಭವಿಸಿದರು.

ನಾಗವಾರ ವೃತ್ತ, ಸಿಂಧುರ ಜಂಕ್ಷನ್‌, ಅಯ್ಯಪ್ಪ ನಗರದಿಂದ ದೇವಸಂದ್ರ ರಸ್ತೆ, ಹಳೆ ಮೈಸೂರು ರಸ್ತೆಯಿಂದ ಖೋಡೆ ಜಂಕ್ಷನ್‌, ಸಾರಕ್ಕಿ ಮೆಟ್ರೊ ನಿಲ್ದಾಣ, ಆಡುಗೋಡಿಯಿಂದ ಆನೆಪಾಳ್ಯ, ಕೆಂಗೇರಿಯಿಂದ ಉತ್ತರಹಳ್ಳಿ, ಕಲ್ಯಾಣ ನಗರದಿಂದ ಹೊರಮಾವು, ಹೆಬ್ಬಾಳದಿಂದ ಸಂಜಯನಗರ ಕ್ರಾಸ್‌, ಉತ್ತರಹಳ್ಳಿಯಿಂದ ಚಿಕ್ಕಲಸಂದ್ರ, ವೈಟ್ ಫೀಲ್ಡ್‌ನಿಂದ ಬಿ ನಾರಾಯಣಪುರ, ರಾಮಮೂರ್ತಿನಗರ ಮುಖ್ಯರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ದಟ್ಟಣೆ ಉಂಟಾಗಿತ್ತು.

‘ಫೆಂಜಲ್‌ ಚಂಡಮಾರುತದಿಂದ ಗಾಳಿ ವೇಗ ಹಾಗೂ ಮಳೆಯಾಗುವ ಮುನ್ಸೂಚನೆ ಇದೆ. ಈವರೆಗೆ ಸಾಧಾರಣ ಮಳೆಯಾಗಿದೆ. ಆದರೂ, ನಗರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, 80 ಜೆಸಿಬಿ ಯಂತ್ರಗಳು ಕಾರ್ಯಾಚರಣೆಗೆ ಸಿದ್ಧವಾಗಿವೆ.‘ಗಾಳಿಗೆ ಮರ ಹಾಗೂ ಕೊಂಬೆಗಳು ಬೀಳುವ ಸಾಧ್ಯತೆ ಇದ್ದು, ಕ್ಷಿಪ್ರ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಮಿಳುನಾಡು, ಕೇರಳದಲ್ಲಿ ಮಳೆ

ಫೆಂಜಲ್‌ ಚಂಡಮಾರುತದ ಪರಿಣಾಮ, ಉತ್ತರ ತಮಿಳುನಾಡಿನ ಹಲವು ಕಡೆ ನಿರಂತರ ಮಳೆಯಾಗಿದೆ. ವಿಲ್ಲುಪುರಂನಲ್ಲಿ ಸೋಮವಾರ ನಿರಂತರವಾಗಿ ಮಳೆ ಸುರಿದಿದ್ದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸೇತುವೆಗಳು ಮತ್ತು ರಸ್ತೆಗಳು ಜಲಾವೃತವಾಗಿದ್ದು ಹಲವು ಗ್ರಾಮಗಳು ಮತ್ತು ಕಾಲೊನಿಗಳು ಸಂಪರ್ಕ ಕಳೆದುಕೊಂಡಿವೆ. ನೂರಾರು ಎಕರೆ ಕೃಷಿ ಭೂಮಿ ನೀರಿನಲ್ಲಿ ಮುಳುಗಿ, ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ.

ಪಶ್ಚಿಮ ತಮಿಳುನಾಡಿನ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲೂ ಕಳೆದ ಎರಡು ದಶಕಗಳಲ್ಲಿ ಅತೀ ಹೆಚ್ಚು ಮಳೆ ಸುರಿದಿದೆ. 24 ತಾಸುಗಳಲ್ಲಿ ಕೃಷ್ಣಗಿರಿಯ ಉತಂಗರೈನಲ್ಲಿ 50 ಸೆಂಟಿ ಮೀಟರ್‌ನಷ್ಟು ಮಳೆಯಾಗಿದೆ. ವೆಲ್ಲುಪುರಂನಲ್ಲಿ 42 ಸೆಂ.ಮೀ, ಧರ್ಮಪುರಿಯ ಹರೂರಿನಲ್ಲಿ 33 ಸೆಂ.ಮೀ, ಕಡಲೂರು ಮತ್ತು ತಿರುವಣ್ಣಾಮಲೈನಲ್ಲಿ 16 ಸೆಂ.ಮೀ ಮಳೆಯಾಗಿದೆ.

ಕೇರಳದಲ್ಲಿ ಮಂಗಳವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಸೋಮವಾರ ಕೇರಳದ ಹಲವೆಡೆ ಸಾಧಾರಣ ಮಳೆಯಾಗಿದೆ. ಉತ್ತರ ಮತ್ತು ಕೇಂದ್ರದ ಹಲವು ಪ್ರದೇಶಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನ ಈ ಭಾಗದಲ್ಲಿ ಗುಡುಗು ಸಹಿತ ಸಾಧರಣ ಮಳೆ ಮುಂದುವರಿಯಲಿದೆ ಎಂದು ತಿಳಿಸಿದೆ. ಕೇರಳದ ಐದು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X