ಮುಂದಿನ ಜೂನ್ 28ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆ, ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಜೂನ್ 28ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿದ್ದೀರಾ? ನವೆಂಬರ್ 5 ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಒಳನಾಡು ಜಿಲ್ಲೆಗಳಲ್ಲಿ ಜೂನ್ 28ರವರೆಗೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಇನ್ನು ಇಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) June 25, 2025
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಇಂದ ಅತಿ ಭಾರಿ ಮಳೆ ಹಾಗೂ ಜೂನ್ 28 ರವರೆಗೆ ಭಾರಿ ಮಳೆ. pic.twitter.com/ap31MvJsqF
ಜೂನ್ 28ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ(ಗಂಟೆಗೆ 30-40 ಕಿ.ಮೀ) ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ(40-50 ಕಿ.ಮೀ) ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ.
ಇದನ್ನು ಓದಿದ್ದೀರಾ? ರಾಜ್ಯದ ಹಲವೆಡೆ ಭಾರಿ ಮಳೆ: ಮಂಗಳೂರಿನಲ್ಲಿ ವಿಮಾನಗಳ ಮಾರ್ಗ ಬದಲು
ಕರ್ನಾಟಕದ ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ನಿರಂತರ ಮಳೆಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಾವಣಗೆರೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿ ಸಮೇತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
