ರಾಜ್ಯದ ಕರಾವಳಿ ಭಾಗವೂ ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. ಆ ಏಳೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗದಲಿದೆ ಎಂದು ಇಲಾಖೆ ಹೇಳಿದೆ.
ಉಳಿದಂತೆ, ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಮಾನ ಇಲಾಖೆ ಸೂಚಿಸಿದೆ.
ಕೋಲಾರದಲ್ಲಿ ಮಂಗಳವಾರ ಮುಂಜಾನೆ ಮಂಜು ತುಂಬಿದ್ದು, ಮಲೆನಾಡು ರೀತಿಯ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲೆಯ ಜನರಲ್ಲಿ ಉಲ್ಲಾಸ ಮನೆ ಮಾಡಿದೆ.
Bidar