ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

Date:

“ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ ಕರ್ತವ್ಯ ನಿರ್ವಹಿಸಿ” ಎಂದು ದಂಪತಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ದಂಪತಿಯ ವಿಚ್ಛೇದನ ಅರ್ಜಿಯನ್ನು ಪುರಸ್ಕರಿಸಿ, ವಿಚ್ಛೇದನ ಮಂಜೂರು ಮಾಡಿದೆ.

- Advertisement -

ಮಂಗಳೂರು ಮೂಲದ 40 ವರ್ಷದ ವ್ಯಕ್ತಿಯೊಬ್ಬರು ತಮ್ಮ ಪತ್ನಿಗೆ 2 ಕೋಟಿ ರೂ. ಶಾಶ್ವತ ಜೀವನಾಂಶ ನೀಡಬೇಕೆಂಬ ಕುಟುಂಬ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರಿ. ಆ ಮೇಲ್ಮನವಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ವಿಚಾರಣೆ ವೇಳೆ, ವೈದ್ಯೆಯಾಗಿರುವ ಪತ್ನಿಯ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿದ ಹೈಕೋರ್ಟ್, ಕುಟುಂಬ ನ್ಯಾಯಾಲಯ ವಿಧಿಸಿದ್ದ 2 ಕೋಟಿ ರೂ. ಶಾಶ್ವತ ಜೀವನಾಂಶವನ್ನು 50 ಲಕ್ಷ ರೂ.ಗೆ ಇಳಿಕೆ ಮಾಡಿದೆ.

“ದಂಪತಿಯ ಇಬ್ಬರು ಹೆಣ್ಣುಮಕ್ಕಳ ಶಿಕ್ಷಣ ಮತ್ತು ವೈದ್ಯಕೀಯ ವೆಚ್ಚಕ್ಕಾಗಿ ತಂದೆಯು ಪ್ರತಿ ಮಗುವಿಗೆ ತಿಂಗಳಿಗೆ 25,000 ರೂ. ನೀಡಬೇಕು. ಈ ಮೊತ್ತವನ್ನು ಪ್ರತಿ ವರ್ಷ 5,000 ರೂ.ಗಳಂತೆ ಹೆಚ್ಚಿಸುತ್ತಾ ಹೋಗಬೇಕು” ಎಂದು ಆದೇಶಿಸಿದೆ.

“ವಿಚ್ಛೇದನವಾಗಿದ್ದರೂ ಮಕ್ಕಳ ಮದುವೆ ಮತ್ತು ಇತರ ಪ್ರಮುಖ ಹಂತಗಳಲ್ಲಿ ತಂದೆ ತನ್ನ ಆರ್ಥಿಕ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ ನಿರ್ವಹಿಸಬೇಕು. ತಂದೆಗೆ ಪ್ರತಿ ಶನಿವಾರ ಮತ್ತು ಭಾನುವಾರ ತಾಯಿಯ ಸಮ್ಮುಖದಲ್ಲಿ ತಲಾ 3 ಗಂಟೆಗಳ ಕಾಲ ಮಕ್ಕಳನ್ನು ಭೇಟಿಯಾಗಲು ಮತ್ತು‌ ಆಡಿಯೋ/ವಿಡಿಯೋ ಕರೆ ಮೂಲಕ ಮಾತನಾಡಲು‌ ಅವಕಾಶ ಇರಬೇಕು” ಎಂದು ಕೋರ್ಟ್ ಹೇಳಿದೆ.

ತಂದೆಯ ಅನುಮತಿ ಮತ್ತು ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಮಕ್ಕಳನ್ನು ವಿದೇಶಕ್ಕೆ ಕರೆದೊಯ್ಯಬಾರದು ಎಂದು ಪತ್ನಿಗೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾ ಇಂಧನ ಖರೀದಿಸಿದರೆ ಭಾರತಕ್ಕೆ ಶೇ 100ರಷ್ಟು ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅಸ್ತು

ರಷ್ಯಾದಿಂದ ತೈಲ ಮತ್ತು ಅನಿಲ ಇಂಧನಗಳನ್ನು ಖರೀದಿಸುತ್ತಿರುವ ಭಾರತ ಹಾಗೂ ಇತರ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...

ಪೊಲೀಸ್ ಕ್ರೌರ್ಯ: ಗರ್ಭಿಣಿ ಹೊಟ್ಟೆಗೆ ಒದ್ದ ಪೊಲೀಸರು; ತಾಯಿ ಸಾವು

ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರು, ಆತನ ಪತ್ನಿ ಗರ್ಭಿಣಿಯ...

ಔರಾದ್‌ | ಇಂದು ಸಂಜೆ ʼಚಟ್ನಾಳ ಸಂಭ್ರಮʼ

ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ...