ನೀವು ಇತಿಹಾಸಕಾರರೇ, ಭಾಷಾತಜ್ಞರೇ: ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ

Date:

Advertisements

“ಕನ್ನಡಿಗರ ಭಾವನೆಗಳಿಗೆ ಹಾನಿ ಮಾಡಿ, ಈಗ ಕ್ಷಮೆ ಕೇಳುವುದಿಲ್ಲ ಎಂದರೆ ಹೇಗೆ? ವಾಕ್‌ ಸ್ವಾತಂತ್ರ್ಯ ಎಂದರೆ ಬೇರೆಯವರ ಭಾವನೆಗಳಿಗೆ ಹಾನಿ ಮಾಡುವುದಲ್ಲ” ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಕ್ಷಮೆ ಕೇಳದಿದ್ದರೆ ಕಮಲ್ ಹಾಸನ್ ಸಿನಿಮಾವನ್ನು ಬಹಿಷ್ಕರಿಸಲಾಗುವುದು ಎಂದು ಚಿತ್ರರಂಗ ಹೇಳಿದೆ. ಈ ಎಲ್ಲಾ ಬೆಳವಣಿಗೆ ನಡುವೆ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಸಿನಿಮಾ ತಂಡವು ಕರ್ನಾಟಕ ಹೈಕೋರ್ಟ್ ಮೊರೆಹೋಗಿದೆ.

ಇದನ್ನು ಓದಿದ್ದೀರಾ? ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಚಿತ್ರ ತಂಡ

Advertisements

ಕಮಲ್‌ ಹಾಸನ್‌ ನಟಿಸಿರುವ ಥಗ್‌ ಲೈಫ್‌ ಸಿನಿಮಾ ಹಂಚಿಕೆ ಮತ್ತು ಬಿಡುಗಡೆಗೆ ಅಗತ್ಯ ಬಂದೋಬಸ್ತ್‌ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, “ಸಾಕಷ್ಟು ಕೋಟಿ ಬಂಡವಾಳ ಹಾಕಿದ್ದೀರಿ ಎಂದು ಹೇಳಿದ್ದೀರಿ. ಪರವಾಗಿಲ್ಲ, ಕ್ಷಮೆ ಕೇಳಲು ಕಮಲ್‌ ಹಾಸನ್‌ಗೆ ಹೇಳಿ” ಎಂದು ಸೂಚಿಸಿದೆ.

ಕಮಲ್‌ ಹಾಸನ್‌ ಪರ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ವಾದಿಸಿದ್ದು, “ತಮಿಳಿನಿಂದ ಕನ್ನಡ ಉದಯಿಸಿದೆ ಎಂದು ಕಮಲ್‌ ಹಾಸನ್‌ ಹೇಳಿದ್ದರು. ಆ ಹೇಳಿಕೆ ಇಟ್ಟುಕೊಂಡು ಕಮಲ್‌ ಹಾಸನ್‌ ಅವರು ನಟಿಸಿರುವ ಥಗ್‌ ಲೈಫ್‌ ಸಿನಿಮಾಗೆ ನಿರ್ಬಂಧ ವಿಧಿಸಲಾಗಿದೆ. ನಮಗೆ ರಕ್ಷಣೆ ನೀಡಬೇಕು” ಎಂದು ಕೋರಿದರು.

“ತಮಿಳಿನಿಂದ ಕನ್ನಡ ಜನಿಸಿದೆ ಎಂದು ಹೇಳಲು ಕಮಲ್‌ ಹಾಸನ್‌ ಅವರು ಭಾಷಾತಜ್ಞರೇ? ಕ್ಷಮೆ ಕೇಳಿದ್ದರೆ ಎಲ್ಲವೂ ಮುಗಿಯುತ್ತಿತ್ತಲ್ಲವೇ? ಆ ಹೇಳಿಕೆ ನೀಡುವ ಅಗತ್ಯವೇನಿತ್ತು? ಇತಿಹಾಸ ಗೊತ್ತಿಲ್ಲದೇ ಆ ಹೇಳಿಕೆ ನೀಡಿದ್ದೇನೆ ಎಂದು ಕ್ಷಮೆ ಕೇಳಿದ್ದರೆ ಮುಗಿಯುತ್ತಿತ್ತಲ್ಲವೇ? ನೀವೇ ಸೃಷ್ಟಿ ಮಾಡಿರುವ ಸಮಸ್ಯೆಗೆ ಪೊಲೀಸರ ರಕ್ಷಣೆ ಕೋರುತ್ತಿದ್ದೀರಾ” ಎಂದು ಪೀಠ ಪ್ರಶ್ನಿಸಿದೆ.

ಇನ್ನು ವಿಡಿಯೋ ಪರಿಶೀಲಿಸಿದ ನ್ಯಾಯಮೂರ್ತಿಗಳು, “ಯಾರ ಭಾವನೆಯನ್ನೂ ತಮ್ಮ ಮನಸೋಇಚ್ಛೆ ನೋಯಿಸಲು ಬಿಡಲಾಗದು. ಹಲವು ಕೋಟಿ ನಷ್ಟವಾಗುತ್ತದೆ ಎನ್ನುವುದಾದರೆ, ನಿಮಗೆ ಕರ್ನಾಟಕ ಏತಕ್ಕೆ ಬೇಕು. ಅದನ್ನು ಬಿಡಿ. ನೀವು ಇತಿಹಾಸಕಾರರೇನಲ್ಲ ಎಂದ ಮೇಲೆ ಕ್ಷಮೆ ಕೋರಲು ಹೇಳಿ. ಆಡಿದ ಮಾತುಗಳು ಬರುವುದಿಲ್ಲ. ಕ್ಷಮೆ ಕೋರುವುದರ ಮೂಲಕ ಅವುಗಳಿಗೆ ಇತಿಶ್ರೀ ಹಾಡಬೇಕು” ಎಂದರು.

“ಅಶಾಂತಿ ಸೃಷ್ಟಿಯಾಗುವುದರ ಬಗ್ಗೆ ಸಮಾಜದಲ್ಲಿ ಖ್ಯಾತಿ ಹೊಂದಿರುವ ವ್ಯಕ್ತಿಯಾದ ಕಮಲ್‌ ಹಾಸನ್‌ ಅವರಿಗೆ ತಿಳಿದಿರಬೇಕು. ಇದನ್ನು ಸೃಷ್ಟಿಸುವುದು ಅವರೇ. ಅದಕ್ಕೆ ಮುಕ್ತಿ ಹಾಡಬೇಕಿರುವುದು ಅವರೇ. ಕ್ಷಮೆ ಕೋರಿದ್ದರೆ ಎಲ್ಲವೂ ಮುಗಿಯುತ್ತಿತ್ತು” ಎಂದು ಪೀಠ ಹೇಳಿದೆ. ಹಾಗೆಯೇ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X