ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತೆ: ಕೆ ಎಸ್‌ ಈಶ್ವರಪ್ಪ

Date:

  • ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ
  • ‘ಖಡ್ಗದ ಮೂಲಕ ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ’

ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತದೆ. ಕಾಂಗ್ರೆಸ್‌ ಸರ್ಕಾರ ಇದನ್ನು ಅರಿತುಕೊಳ್ಳಲಿ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದರು.

- Advertisement -

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ. ಮೆರವಣಿಗೆಗೆ ಹೋಗುವ ಸಂದರ್ಭದಲ್ಲಿ ಕೈಯಲ್ಲಿ ತಲ್ವಾರ್ ಹಿಡಿದುಕೊಂಡು ಹೋಗುತ್ತಾರೆ. ಯಾರಿಗೆ ಎಚ್ಚರ ಅದು, ಹಿಂದೂ ಸಮಾಜಕ್ಕಾ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಶಿವಮೊಗ್ಗ ನಗರದಲ್ಲಿ ದೊಡ್ಡ ದೊಡ್ಡ ತಲ್ವಾರ್ ನೇತು ಹಾಕಿದ್ದಾರೆ. ಕೋಲಾರದಲ್ಲೂ ಹಾಕಿದ್ದರು. ಆದರೆ ಅಲ್ಲಿನ ಸಂಸದರ ಎಚ್ಚರಿಕೆ ಬಳಿಕ ತೆಗೆದರು. ಅದು ಗೊತ್ತಿದ್ದರೂ ಇಲ್ಲಿ ದೊಡ್ಡ ಖಡ್ಗ ಹಾಕಲು ಯಾಕೆ ಬಿಟ್ಟರು? ಪೊಲೀಸಿನವರು ಸರ್ಕಾರಕ್ಕೆ ಹೆದರಿ ಹೋಗಿದ್ದಾರೆ. ತಲ್ವಾರ್‌ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ” ಎಂದರು.

“ಖಡ್ಗ ಹಾಕಿ ಯಾರಿಗೆ ಸ್ಫೂರ್ತಿ ಕೊಡುತ್ತಾರೆ. ಅವರೆಲ್ಲ ದೇಶ ದ್ರೋಹಿಗಳು. ಮುಸ್ಲಿಂ ಸಮಾಜ ಹಬ್ಬವನ್ನು ಮಾಡಿಲ್ಲ, ಅವರು ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇದೆಲ್ಲ ಸರ್ಕಾರಕ್ಕೆ ಗೊತ್ತಿಲ್ಲವೇ? ರಾಗಿಗುಡ್ಡಕ್ಕೆ ನಮ್ಮ ಶಾಸಕರು ಹೋಗಿ ಬಂದಿದ್ದಾರೆ. ಮನೆಗಳಿಗೆ ನುಗ್ಗಿ ನುಗ್ಗಿ ಹೊಡೆದಿದ್ದಾರೆ. ಕಲ್ಲು ತೂರಾಟ ಮಾಡಿದ್ದಾರೆ. ಹಿಂದೂ ಮನೆಗಳಿಗೆ ಮಾತ್ರ ಕಲ್ಲು ಹೊಡೆದು, ಒಳ ನುಗ್ಗಿದ್ದಾರೆ” ಎಂದು ಹೇಳಿದರು.

“ಮುಸ್ಲಿಂ ಮನೆಗಳಿಗೆ ಯಾವುದೇ ಕಲ್ಲು ಬಿದ್ದಿಲ್ಲ. ಕರ್ತವ್ಯದಲ್ಲಿದ್ದ ಹಲವು ಪೊಲೀಸರಿಗೂ ಕಲ್ಲು ಬಿದ್ದಿದೆ. ಪೊಲೀಸರು ಮೆರವಣಿಗೆಗೆ ಅನುಮತಿ ಕೊಟ್ಟ ರೂಟ್ ಬೇರೆ ಆದರೆ ಅವರು ಹೋಗಿದ್ದೇ ಬೇರೆ. ಸಂಜೆ 6 ಗಂಟೆಗೆ ಮೆರವಣಿಗೆ ಮುಗಿಸಲು ಹೇಳಿದರೂ 7.30 ವರೆಗೂ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ” ಎಂದು ವಾಗ್ದಾಳಿ ನಡೆಸಿದರು.

“ಗೃಹಮಂತ್ರಿಗಳು ಬರಲಿ, ಆ ಏರಿಯಾದ ಮನೆಗಳಿಗೆ ಹೋಗಿ ನೋಡಲಿ. ಸಣ್ಣಪುಟ್ಟ ಗಲಾಟೆ, ತಲ್ವಾರ್ ಹಿಡಿದಿಲ್ಲ ಎನ್ನುವ ಸಚಿವರು ಗೃಹಮಂತ್ರಿ ಅಗಲು ಅನ್ ಫಿಟ್, ರಾಜೀನಾಮೆ ಕೊಡಲಿ. ಶಿವಮೊಗ್ಗದಲ್ಲಿ ಹಿಂದೂ ಸಮಾಜ ಎದ್ದು ನಿಂತರೇ, ಮುಸಲ್ಮಾನ ಸಮಾಜ ಉಳಿಯುತ್ತಾ?” ಎಂದು ಹೇಳಿದರು.

ಮುಸಲ್ಮಾನರ ರಕ್ಷಣೆಗೆ ಮಾತ್ರ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ ಇರುವುದಾ? ಹಿಂದೂಗಳ ರಕ್ಷಣೆ ಮಾಡಲ್ವಾ? ಹಿಂದೂ ಸಮಾಜದ ಯಾರು ಕೂಡ ಕಲ್ಲು ಹೊಡೆದಿಲ್ಲ. ಸಂಘಟನೆಗಳಲ್ಲಿ ಸಕ್ರಿಯರಾದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...