ರಾಜೀನಾಮೆ ಕೇಳುವ ಮುನ್ನ 25 ದಿನ ಉಪವಾಸ ಸತ್ಯಾಗ್ರಹ ಮಾಡಲಿ: ವಿಪಕ್ಷಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

Date:

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. “ನನ್ನ ರಾಜೀನಾಮೆ ಕೇಳುವವರು ಮೊದಲು 25 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಲಿ, ಆಮೇಲೆ ನಾನು ರಾಜೀನಾಮೆ ನೀಡುತ್ತೇನೆ” ಎಂದು ಅವರು ಸವಾಲು ಹಾಕಿದ್ದಾರೆ.

- Advertisement -

ಭಾನುವಾರ ರಾಜ್ಯಾದ್ಯಂತ ಒಟ್ಟು 3,991 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿತ್ತು. ಈ ವೇಳೆ ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಬ ಶೈಕ್ಷಣಿಕ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ, ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ (OMR) ಉತ್ತರ ಪತ್ರಿಕೆಯ ಕ್ರಮಸಂಖ್ಯೆಗಳು (Serial Numbers) ಹೊಂದಾಣಿಕೆಯಾಗುತ್ತಿಲ್ಲ ಎಂದು ಆರೋಪಿಸಿ ಕೆಲ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಬಂದು ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆಯನ್ನು ‘ಆಡಳಿತ ವೈಫಲ್ಯ’ ಎಂದು ಟೀಕಿಸಿದ್ದ ಪ್ರತಿಪಕ್ಷ ನಾಯಕ ಆರ್. ಅಶೋಕ್, ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

ಸೋಮವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಖರ್ಗೆ, “ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಯ ಮಾದರಿಯಲ್ಲಿ ವಿಪಕ್ಷಗಳು 25 ದಿನ ಉಪವಾಸ ಸತ್ಯಾಗ್ರಹ ಮಾಡಲಿ. ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಲಾಠಿ ಚಾರ್ಜ್ ಮಾಡಿಸುತ್ತೇವೆ, ಆ ನಂತರವಷ್ಟೇ ನಾನು ರಾಜೀನಾಮೆ ಕೊಡುತ್ತೇನೆ” ಎಂದು ವ್ಯಂಗ್ಯವಾಡಿದರು. ಇದೇ ವೇಳೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯನ್ನು ಪ್ರಸ್ತಾಪಿಸಿದ ಅವರು, “ಪಿಎಸ್‌ಐ (PSI) ನೇಮಕಾತಿ ಹಗರಣದಲ್ಲಿ ಎಡಿಜಿಪಿ ದರ್ಜೆಯ ಅಧಿಕಾರಿಯೇ ಜೈಲುಪಾಲಾಗಿದ್ದರು. ಆಗ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಏಕೆ ರಾಜೀನಾಮೆ ನೀಡಲಿಲ್ಲ?” ಎಂದು ಮರುಪ್ರಶ್ನೆ ಹಾಕಿದರು.

ಪರೀಕ್ಷಾ ಕೇಂದ್ರದಲ್ಲಿ ನಡೆದ ಗದ್ದಲದ ಬಗ್ಗೆ ಮಾತನಾಡಿದ ಸಚಿವರು, ಪರೀಕ್ಷಾ ಕೊಠಡಿಯಿಂದ ಒಮ್ಮೆ ಹೊರಬಂದರೆ ಮರಳಿ ಪ್ರವೇಶಿಸಲು ಅವಕಾಶವಿಲ್ಲ. ಅಭ್ಯರ್ಥಿಗಳು ಪರೀಕ್ಷೆ ಮುಗಿದ ಬಳಿಕ ತಮ್ಮ ಆಕ್ಷೇಪಣೆಯನ್ನು ದಾಖಲಿಸಬಹುದಿತ್ತು. ಆದರೆ, ಹೊರಬಂದು ಪ್ರತಿಭಟಿಸಿರುವುದು ನಿಯಮಬಾಹಿರ ಎಂದರು.

ಇದೇ ವಿಚಾರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೂಡ ಸ್ಪಷ್ಟನೆ ಬಿಡುಗಡೆ ಮಾಡಿದ್ದು, ಪ್ರಾಧಿಕಾರದ ಯಾವುದೇ ಅಧಿಸೂಚನೆಯಲ್ಲಿ ‘ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಒಂದೇ ಆಗಿರಬೇಕು’ ಎಂದು ಎಲ್ಲಿಯೂ ತಿಳಿಸಿಲ್ಲ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, “ಮಳೆಯ ಕಾರಣದಿಂದಾಗಿ ಅಭ್ಯರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿರುವುದು ಇದೇ ಮೊದಲು. ಇಂತಹ ಪರಿಸ್ಥಿತಿ ಎದುರಾದಾಗ ಏನು ಮಾಡಬೇಕು ಎಂಬುದರ ಬಗ್ಗೆ ನಿಯಮಾವಳಿಯಲ್ಲಿ ಸ್ಪಷ್ಟ ಉಲ್ಲೇಖವಿಲ್ಲ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...

ಬೆಂಗಳೂರು ಸಂಚಾರ ನರಕ: 4 ಕಿ.ಮೀ. ದೂರದ ಮನೆ ತಲುಪಲು 2.5 ಗಂಟೆ ರಸ್ತೆಯಲ್ಲೇ ಕಳೆದ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿರುವ ರಾಜ್ಯ ಹೆದ್ದಾರಿ-35ರ (SH-35) ವರ್ತೂರು-ಗುಂಜೂರು ಮಾರ್ಗದಲ್ಲಿ ಸಂಚರಿಸುವ ನೂರಾರು ಶಾಲಾ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...