ಹನಿಟ್ರ್ಯಾಪ್ | ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ: ಡಿ ಕೆ ಶಿವಕುಮಾರ್ ಮಾರ್ಮಿಕ ಮಾತು

Date:

Advertisements

ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಕೇಳಿದಾಗ, “ಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆ” ಎಂದು ಮಾರ್ಮಿಕವಾಗಿ ನುಡಿದರು.

Advertisements

ಮಾಡಿದ್ದುಣ್ಣೋ ಮಹಾರಾಯ

ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ” ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಬಂದ್ ಅವಶ್ಯಕತೆಯಿಲ್ಲ

ನಾಳಿನ (ಮಾ.22) ಕರ್ನಾಟಕ ಬಂದ್ ಬಗ್ಗೆ ಕೇಳಿದಾಗ, “ರಾಜ್ಯದ ಹಿತಕ್ಕೆ ಒಳ್ಳೆ ಕೆಲಸಕ್ಕೆ ಏನಿದ್ದರೂ ನಾವು ಬೆಂಬಲ ನೀಡುತ್ತೇವೆ. ಕಾನೂನಿನಲ್ಲಿ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಾವ ಗಲಾಟೆಗಳನ್ನೂ ಮಾಡದೆ, ಯಾವ ಬಂದ್ ಕೂಡ ಮಾಡದೇ ದಯವಿಟ್ಟು ಎಲ್ಲರೂ ಶಾಂತರೀತಿಯಿಂದ ಇರಬೇಕು ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X