ರೇಣುಕಾಸ್ವಾಮಿ ಕೊಲೆ | ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಫಜೀತಿ?

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಫಜೀತಿ ಎದುರಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

- Advertisement -

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ನಟ ದರ್ಶನ್‌ ಮತ್ತವನ ಗ್ಯಾಂಗ್‌ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಸಾಧಾರಣವಾಗಿ ಪ್ರಕರಣವು ತನಿಖಾ ಹಂತದಲ್ಲಿರುವಾಗ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಆದರೆ, ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ಅವರು ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ಪಶ್ಚಿಮ ವಿಭಾಗದ ಪೊಲೀಸರು ಶೀಘ್ರವೇ ನೋಟಿಸ್‌ ನೀಡುವ ಸಾಧ್ಯತೆಯಿದೆ.

ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು‌ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸಬಹುದು. ಇದರ ಜೊತೆಯಲ್ಲಿ ಸಾಕ್ಷಿ-ಆರೋಪಿ ಭೇಟಿ ಬಗ್ಗೆ ಜೈಲಾಧಿಕಾರಿಗಳ ಬಳಿಯೂ ಮಾಹಿತಿ ಪಡೆಯಬಹುದು. ಅಷ್ಟೇ ಅಲ್ಲದೇ ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ.

ಕಳೆದ ಜೂನ್ 8 ರಂದು ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು. ಪಾರ್ಟಿ ಬಳಿಕ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದರೆ ಚಿಕ್ಕಣ್ಣ ಮನೆಗೆ ತೆರಳಿದ್ದರು.

ಚಿಕ್ಕಣ್ಣ ಪ್ರಮುಖ ಸಾಕ್ಷಿ

ಯಾವುದೇ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆಸಿ ಸಾಕ್ಷಿಗಳನ್ನು ವಿಚಾರಣೆ ನಡೆಸುತ್ತಾರೆ. ಆದರೆ ಪ್ರಕರಣ ಒಂದರಲ್ಲಿ ಆ ವ್ಯಕ್ತಿಯ ಹೇಳಿಕೆ ಪ್ರಮುಖ ಸಾಕ್ಷಿ ಆಗಲಿದೆ ಎಂದಾದರೆ ಮಾತ್ರ ಆ ವ್ಯಕ್ತಿಯನ್ನು ಜಡ್ಜ್‌ ಮುಂದೆ ಹಾಜರು ಪಡಿಸಿ ಹೇಳಿಕೆ ನೀಡಲಾಗುತ್ತದೆ.

ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ಪೊಲೀಸರು ದಾಖಲಿಸಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲೆಂದೇ ಪೊಲೀಸರು ಜಡ್ಜ್‌ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ನಡೆದ ದಿನ ದರ್ಶನ್ ಅವರ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಚಿಕ್ಕಣ್ಣ ಠಾಣೆಗೆ ಬಂದು ಪೊಲೀಸರು ಕೇಳಿದ ವಿವರಗಳನ್ನು ನೀಡಿದ್ದರೂ ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆಯನ್ನು ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...