ನಾನು ಬಾಬಾಸಾಹೇಬರ ಸಿದ್ಧಾಂತದವನು, ಹೆದರುವ ಮಾತೇ ಇಲ್ಲ: ರಮೇಶ್‌ ಜಿಗಜಿಣಗಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

“ದಲಿತರಿಗೇಕೆ ಬೇಕು RSS ವಿಷಯ?” ಎಂದು ಪ್ರಶ್ನಿಸಿದ್ದ ವಿಜಯಪುರ ಬಿಜೆಪಿ ಸಂಸದ ರಮೇಶ್‌ ಜಿಗಜಿಣಗಿ ಅವರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. “ನಾನು ಬಾಬಾ ಸಾಹೇಬರ ಸಿದ್ದಾಂತದವನು, ಪ್ರಶ್ನಿಸುವ ಧೈರ್ಯ ಮತ್ತು ವೈಚಾರಿಕತೆ ಅವರಿಂದಲೇ ಬಂದಿರುವುದು, ಬಾಬಾ ಸಾಹೇಬರನ್ನು ನಂಬಿದವರಿಗೆ ಅಂಜಿಕೆ ಎಂಬುದೇ ತಿಳಿದಿರುವುದಿಲ್ಲ” ಎಂದಿದ್ದಾರೆ.

- Advertisement -

X ನಲ್ಲಿ ಟ್ವೀಟ್‌ ಮಾಡಿರುವ ಅವರು, “ರಮೇಶ್‌ ಜಿಗಜಿಣಗಿ ಅವರು ಕೇಳಿರುವ ಮಾತು ವಿವಿಧ ಆಯಾಮಗಳಿಂದ ವಿಮರ್ಶಿಸಬೇಕಾಗಿರುವ ಪ್ರಶ್ನೆ. ದಲಿತ ಸಮುದಾಯದವರೇ ಆಗಿರುವ ರಮೇಶ್ ಜಿಗಜಿಣಗಿಯವರಿಗೆ ಇದು RSS ಗರ್ಭಗುಡಿಯೊಳಗೆ ಪ್ರವೇಶ ಸಿಗದಿರುವ ಹತಾಶೆಯ ಮಾತೇ? ಶ್ರೇಣೀಕೃತ ವ್ಯವಸ್ಥೆಯ ಮೂಲಭೂತವಾದವನ್ನು ನಂಬಿರುವ RSS ಸಹವಾಸಕ್ಕೆ ದಲಿತರು ಹೋಗಬೇಡಿ ಎಂಬ ಎಚ್ಚರಿಕೆಯ ಮಾತುಗಳೇ? ಸಮಾಜದಲ್ಲಿನ ಮೇಲರಿಮೆಯ ಮನಸ್ಥಿತಿಯ ಜನರ ಹಿತಾಶಕ್ತಿ ಕಾಯಲು ರೂಪುಗೊಂಡಿರುವ RSSನ್ನು ಪ್ರಶ್ನೆ ಮಾಡಲು ದಲಿತನಾಗಿ ನಿನಗೆ ಅರ್ಹತೆ ಇಲ್ಲ ಎಂದು ನನಗೆ ಹೇಳಿರುವ ಕುಹಕದ ಮಾತುಗಳೇ? RSSನಂತಹ ವ್ಯವಸ್ಥೆಯನ್ನು ಸಂವಿಧಾನದ ಹಾದಿಗೆ ತರಲು ದಲಿತರಿಗೆ ಸಾಧ್ಯವಿಲ್ಲ ಎಂಬ ಹತಾಶೆಯ ಮಾತುಗಳೇ?ʼʼ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“RSS ತಂಟೆಗೆ ಹೋದವರು ಯಾರೂ ಉಳಿದಿಲ್ಲ” ಎಂಬ ಎಚ್ಚರಿಕೆಯನ್ನೂ ಕೊಟ್ಟಿರುವ ರಮೇಶ್ ಜಿಗಜಣಗಿಯವರು RSSನ ಭಯಕ್ಕೊಳಪಟ್ಟು ಹೇಳಿರುವುದೋ ಅಥವಾ ನನ್ನನ್ನು ಭಯಪಡಿಸಲು ಹೇಳಿರುವುದೋ? ಈ ಬೆದರಿಕೆಯ ಹಿಂದಿರುವ ಕಾರಣಗಳೇನು? “ಯಾರೂ ಉಳಿದಿಲ್ಲ” ಎಂದರೆ ಏನರ್ಥ RSS ಭಯೋತ್ಪಾದಕ ಸಂಘಟನೆಯೇ? ಪ್ರಶ್ನಿಸುವವರನ್ನು ಮುಗಿಸುತ್ತದೆಯೇ? ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: RSS ಬೃಹತ್ ಗೌಪ್ಯ ಜಾಲವು ಅಧಿಕಾರವನ್ನು ಹೇಗೆ ನಿರ್ಮಿಸುತ್ತಿದೆ ಮತ್ತು ನಿರ್ವಹಿಸುತ್ತಿದೆ?

“ರಮೇಶ್ ಜಿಗಜಣಗಿಯವರೇ, ನಾನು ಬಾಬಾ ಸಾಹೇಬರ ಸಿದ್ದಾಂತದವನು, ನಾನು ಸಂವಿಧಾನದ ರಕ್ಷಣೆಯ ನೆರಳಲ್ಲಿರುವವನು, ಸಂವಿಧಾನದಡಿಯಲ್ಲಿ ಮಾನ್ಯತೆಯೇ ಇಲ್ಲದವರಿಗೆ ಭಯಪಡುವ ಜಾಯಮಾನ ನನ್ನದಲ್ಲ. ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ” ಎಂದು ತಿವಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...