ಕಾನೂನು ಬಾಹಿರ ಟೆಂಡರ್ | ಮಾರ್ಕ್ಸ್ ಕಾರ್ಡ್‌ಗಳಲ್ಲಿ ಲೂಟಿಗಿಳಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

Date:

Advertisements

ಕಾಂಗ್ರೆಸ್ ಸರಕಾರ ಲೂಟಿಯಲ್ಲಿ ತೊಡಗಿದೆ. ಕಾನೂನುಬಾಹಿರವಾಗಿ ಟೆಂಡ‌ರ್‌ಗಳನ್ನು ಮಾಡುತ್ತಿದೆ. ತನಗೆ ಬೇಕಾದವರಿಗೇ ಅವಕಾಶ ನೀಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್‍ನಲ್ಲಿ ಟೆಂಡರ್‌ಗಳನ್ನು ಹಾಕುತ್ತಾರೆ. ಮಾರ್ಕ್ಸ್ ಕಾರ್ಡ್ ಪ್ರಿಂಟ್ ಮಾಡುವ ಕಾರ್ಯದಲ್ಲಿ ನಮ್ಮ ಸರಕಾರ ಇರುವಾಗಲೂ ಟೆಂಡರ್ ನೀಡಿದ್ದು, ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 9.45 ರೂ.ಗೆ ಟೆಂಡರ್ ಕೊಡಲಾಗಿತ್ತು. ಈ ಸರಕಾರ ಬಂದ ಬಳಿಕ ಪ್ಯಾರಾ ಮೆಡಿಕಲ್ ಬೋರ್ಡಿನ ಟೆಂಡರ್ ಕರೆದಿದ್ದು, ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 100 ರೂ. ಕೋರಿದೆ. ಮಾತುಕತೆ ಬಳಿಕ 91 ರೂ.ಗೆ ಇಳಿಸಲಾಗಿದೆ” ಎಂದು ಆಕ್ಷೇಪಿಸಿದರು.

“ಕೆಲವೆಡೆ ವಿಷಯ ಹೊರಬಂದುದರಿಂದ ಮತ್ತೆ ಮಾತುಕತೆ ಮಾಡಿ ಒಂದು ಮಾರ್ಕ್ಸ್ ಕಾರ್ಡ್ ಮುದ್ರಿಸಲು 44 ರೂ., ಡಿಪ್ಲೊಮಾ ಸರ್ಟಿಫಿಕೇಟಿಗೆ 47 ರೂ. ಎಂದು ಬದಲಿಸಿದ್ದರು. ಇಂಟರ್ನ್‍ಶಿಪ್ ಸರ್ಟಿಫಿಕೇಟ್‍ಗೆ 44 ರೂ. ನಿಗದಿ ಮಾಡಿ ವರ್ಕ್ ಆರ್ಡರ್ ಕೊಟ್ಟಿದ್ದಾರೆ. ಕಳೆದ ನವೆಂಬರ್ 29ರಂದು ಈ ವರ್ಕ್ ಆರ್ಡರ್ ಕೊಡಲಾಗಿದೆ” ಎಂದು ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಸಂಜಯನಗರದ ಊರ್ದವ್ ಮೆನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ಗೆ ಈ ವರ್ಕ್ ಆರ್ಡರ್ ಕೊಡಲಾಗಿದೆ. ಇದು ಗೊತ್ತಾಗಿ ಜನವರಿ 8 ರಂದು ನಾನು ಸರಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಗಮನ ಸೆಳೆದಿದ್ದೆ. ಇದುವರೆಗೂ ಉತ್ತರ ಕೊಟ್ಟಿಲ್ಲ. ಇದರ ಹಣಕಾಸಿನ ಬಿಡ್ 4-12-2024ರಂದು ಅನುಮೋದನೆ ಪಡೆದಿದೆ ಎಂದು ಗಮನ ಸೆಳೆದರು. ಮೊದಲೇ ವರ್ಕ್ ಆರ್ಡರ್ ಕೊಡಲಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲರ ಖಾತೆಗೆ ಸೇರಿದ್ದು” ಎಂದರು.

“ಊರ್ದವ್ ಮೆನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ವೆಂಕಟರೆಡ್ಡಿ ಪಾಟೀಲರಿಗೆ ಇದನ್ನು ಕೊಟ್ಟಿದ್ದು, ಅವರು ಸಚಿವ ಡಾ.ಶರಣಪ್ರಕಾಶ್ ಪಾಟೀಲರ ಹತ್ತಿರದ ಸಂಬಂಧಿ. ಈ ಊರ್ದವ್ ಮೆನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂಬುದು ಈವೆಂಟ್ ಮೆನೇಜ್‍ಮೆಂಟ್ ಕಂಪೆನಿ. ಇದಕ್ಕೂ ಪ್ರಿಂಟಿಂಗ್‍ಗೂ ಏನೂ ಸಂಬಂಧ ಇಲ್ಲ. ಅವರು ಯಾವತ್ತೂ ಮುದ್ರಣದ ಕೆಲಸ ಮಾಡಿಲ್ಲ” ಎಂದು ದೂರಿದರು.

“ಸಚಿವರಿಗೆ ಬೇಕಾದವರಿಗೆ ಕೊಡಲು ಕ್ರಮ ಕೈಗೊಂಡಿದ್ದಾರೆ. ಇದು ಬ್ಲ್ಯಾಕ್ ಲಿಸ್ಟೆಡ್ ಕಂಪೆನಿ. ಇದರ ಮೇಲೆ ಸುಮಾರು 20-25 ಕೇಸುಗಳಿವೆ. ಇಂಥ ಕಂಪೆನಿಗೆ ಟೆಂಡರ್ ಕೊಡಲಾಗಿದೆ. ಬ್ಲ್ಯಾಕ್ ಲಿಸ್ಟೆಡ್ ಕಂಪೆನಿಗೆ ಟೆಂಡರ್ ಕೊಟ್ಟಿದ್ದಾರೆ. ಹಣಕಾಸಿನ ಬಿಡ್ ಇಲ್ಲದೆ ಟೆಂಡರ್ ನೀಡಿದ್ದಾರೆ. ನಾವು 9 ರೂ. 45 ಪೈಸೆಗೆ ಕೊಟ್ಟಾಗ 2.45 ಲಕ್ಷ ಎಂದು ತಿಳಿಸಿದ್ದೆವು. ಈ ಬಿಡ್‍ನಲ್ಲಿ ಎಷ್ಟು ಸಂಖ್ಯೆಯ ಸರ್ಟಿಫಿಕೇಟ್ ಮುದ್ರಣ ಎಂದು ತಿಳಿಸಿಲ್ಲ; ಅಂದರೆ ಅವರು ಎಷ್ಟು ಬೇಕಿದ್ದರೂ ಸಂಖ್ಯೆ ಹೇಳಿಕೊಳ್ಳಬಹುದು ಎಂದು ಟೀಕಿಸಿದರು. ಈ ಸಂಬಂಧ ನಾನು ಎರಡು-ಮೂರು ಪತ್ರ ಬರೆದರೂ ಮುಖ್ಯ ಕಾರ್ಯದರ್ಶಿ, ಇಲಾಖೆಯಿಂದ ಒಂದೇ ಒಂದು ಉತ್ತರ ಬಂದಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X