ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯ: ಕೆಪಿಎಸ್‌ಸಿ ಫಲಿತಾಂಶ ತಡೆಯುವಂತೆ ಸಿಎಂಗೆ ಸಾಹಿತಿ ಬರಗೂರು ಪತ್ರ

Date:

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗಾಗಿ ಇತ್ತೀಚೆಗೆ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ, ಭಾಷಾಂತರದ ಕಾರಣಕ್ಕೆ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಆ ಅನ್ಯಾಯ ಸರಿಪಡಿಸುವವರೆಗೂ ಫಲಿತಾಂಶವನ್ನು ತಡೆ ಹಿಡಿಯಬೇಕು’ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರಗೂರು ಪತ್ರ ಬರೆದಿದ್ದು, ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

‘ಮೊದಲು ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯ ಭಾಷಾಂತರದಲ್ಲಿ ತಪ್ಪುಗಳು ಆಗಿದ್ದವು. ಹೀಗಾಗಿ ಮರುಪರೀಕ್ಷೆ ನಡೆಸಲಾಯಿತು. ಅದರಲ್ಲೂ ಕನ್ನಡ ಭಾಷಾಂತರದ ಸಮಸ್ಯೆ ಇದ್ದೇ ಇದೆ. ಅದರಿಂದ ಉಂಟಾದ ಗೊಂದಲದ ಕಾರಣಕ್ಕೆ ಕನ್ನಡದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಗರಿಷ್ಠ ಪ್ರಮಾಣದಲ್ಲಿ ಅನುತ್ತೀರ್ಣರಾಗಿದ್ದಾರೆ’ ಎಂದು ಪತ್ರದಲ್ಲಿ ಬರಗೂರು ವಿವರಿಸಿದ್ದಾರೆ.

‘ಪೂರ್ವಭಾವಿ ಮರುಪರೀಕ್ಷೆಯಲ್ಲಿ ಉತ್ತೀರ್ಣರಾದ ಕನ್ನಡದ ಅಭ್ಯರ್ಥಿಗಳ ಪ್ರಮಾಣ ಶೇ 15–20ರಷ್ಟು ಮಾತ್ರ. ಕನ್ನಡ ಅನುವಾದದಲ್ಲಿ ಹೀಗೆ ಪದೇ ಪದೇ ತಪ್ಪುಗಳು ಆಗುತ್ತಿದ್ದರೆ, ಕನ್ನಡ ಏಕೆ ಬೇಕು ಎಂಬ ಮನೋಭಾವ ಬೆಳೆಯುತ್ತದೆ. ಇದನ್ನು ತಪ್ಪಿಸಲು ಸರ್ಕಾರವು ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಸಹಿ ಸಂಗ್ರಹಕ್ಕೆ ತಡೆಯೊಡ್ಡಿದ ಪೊಲೀಸರು: ಬೆಂಬಲಕ್ಕೆ ನಿಂತ ಜನ

‘ಕನ್ನಡದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ, ನಂತರ ಇಂಗ್ಲಿಷ್‌ಗೆ ಅನುವಾದಿಸುವುದು ಸರಿಯಾದ ಕ್ರಮ. ಆದರೆ ಇಲ್ಲಿ ಇಂಗ್ಲಿಷ್‌ನಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ, ಕನ್ನಡಕ್ಕೆ ಅನುವಾದ ಮಾಡಲಾಗಿದೆ. ಇದು ಕರ್ನಾಟಕ ಆಡಳಿತ ಭಾಷಾ ನೀತಿಯ ಸ್ಪಷ್ಟ ಉಲ್ಲಂಘನೆ ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

‘ಕನ್ನಡದ ಬದಲು ಇಂಗ್ಲಿಷ್‌ಗೆ ಆದ್ಯತೆ ನೀಡಿ, ಆಡಳಿತ ಭಾಷಾ ನೀತಿಯನ್ನು ಉಲ್ಲಂಘಿಸಿದವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಕನ್ನಡದಲ್ಲಿ ಪರೀಕ್ಷೆ ಬರೆದವರು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವುದರ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...