‘ಶ್ರೀರಾಮ’ನ ಕುರಿತು ಅವಹೇಳನ: ಸಾಹಿತಿ ಕೆ.ಎಸ್‌ ಭಗವಾನ್ ಖುಲಾಸೆ

Date:

Advertisements

ಶ್ರೀರಾಮನನ್ನು ಹೀಯಾಳಿಸಿ, ಅವಹೇಳನ ಮಾಡಿದ್ದಾರೆ ಎಂದು ಸಾಹಿತಿ ಕೆ.ಎಸ್‌ ಭಗವಾನ್ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಪ್ರಕರಣದಲ್ಲಿ ಭಗವಾನ್ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಎಂಬ ಪುಸ್ತಕದಲ್ಲಿ ಶ್ರೀರಾಮನ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಿಸಿದ್ದಾರೆ. ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತೆ, ವಕೀಲೆ ಮೀರಾ ರಾಘವೇಂದ್ರ ಅವರು ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 37ನೇ ಎಸಿಎಂಎಂ ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸಿದೆ.

Advertisements

ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿಯೂ ಭಗವಾನ್ ಅವರನ್ನು ಇತ್ತೀಚೆಗೆ ಖುಲಾಸೆಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ, ನ್ಯಾಯಾಲಯಕ್ಕೆ ಹಾಜರಾಗಿದ್ದ ಭಗವಾನ್ ಅವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದಿದ್ದರು. ನ್ಯಾಯಾಲಯದ ಆವರಣದಲ್ಲಿ ದುರ್ನಡತೆ ತೋರಿದ ಮೀರಾ ಅವರ ವಕೀಲಿಕೆಗೆ ನ್ಯಾಯಾಲಯವು ನಿರ್ಬಂಧ ಹೇರಿತ್ತು. 3 ತಿಂಗಳ ಕಾಲ ಭಾರತದ ಯಾವುದೇ ನ್ಯಾಯಾಲಯದಲ್ಲಿ ವಕೀಲಿಕೆ ನಡೆಸದಂತೆ ನಿರ್ಬಂಧಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X