ಒಳಮೀಸಲಾತಿ | ಆಯೋಗದ ಮಧ್ಯಂತರ ವರದಿ ಗುರುವಾರ ಸರ್ಕಾರಕ್ಕೆ ಸಲ್ಲಿಕೆ

Date:

Advertisements

ಒಳಮೀಸಲಾತಿ ವಿಚಾರ ತಾರ್ಕಿಕ ಅಂತ್ಯದ ಕಡೆ ಸಾಗುವಂತೆ ಕಾಣುತ್ತಿದೆ. ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ಗುರುವಾರ (ಮಾ.27) ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಿದೆ.

ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡುತ್ತಿದೆ.

ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ (ಉಪ ವರ್ಗೀಕರಣ)ಜಾರಿ ಕುರಿತು ಹೋರಾಟ ಆರಂಭವಾಗಿ ಸುಮಾರು ಮೂರು ದಶಕಗಳೇ ಸಂದಿವೆ. ಆದರೂ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ರಾಜ್ಯದಲ್ಲೂ ಒಳಮೀಸಲಾತಿ ಜಾರಿ ಮಾಡುವುದಾಗಿ ಸರ್ಕಾರ ಘೋಷಿಸಿದೆ.

Advertisements

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಎಡಗೈ-ಬಲಗೈ ಎಂಬ ಅಪಸ್ವರ ಎತ್ತದೆ ಎಲ್ಲರೂ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಪರಿಶಿಷ್ಟ ಸಮುದಾಯದ ಸಚಿವರು, ಶಾಸಕರು ನಿರ್ಧರಿಸಿದ್ದಾರೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ನಿವಾಸದಲ್ಲಿ ಪರಿಶಿಷ್ಟ ಸಮುದಾಯದ ಸಚಿವರು, ಶಾಸಕರು ಹಾಗೂ ಕೆಲವು ಮುಖಂಡರು ದೀರ್ಘ ಸಮಾಲೋಚನೆ ನಡೆಸಿ ಒಂದು ತೀರ್ಮಾನಕ್ಕೆ ಬಂದಿದ್ದಾರೆ.

ಹಾಗೆಯೇ ಗೃಹ ಸಚಿವ ಜಿ. ಪರಮೇಶ್ವರ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ದರ್ಶನ್ ಧ್ರುವನಾರಾಯಣ, ಎನ್. ಶ್ರೀನಿವಾಸ, ವಿಧಾನ ಪರಿಷತ್‌ ಸದಸ್ಯ ಎಚ್.ಪಿ. ಸುಧಾಮ್ ದಾಸ್, ಡಾ.ಡಿ. ತಿಮ್ಮಯ್ಯ ಮುಂತಾದವರು ಸೇರಿ ಈಗಾಗಲೇ ಸಭೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X