ನ್ಯಾ. ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿದ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿ, ಬೇಡಿಕೆ ಈಡೇರಿಕೆಗೆ ಮನವಿ

Date:

Advertisements

ಕರ್ನಾಟಕ ಪರಿಶಿಷ್ಟ ಜಾತಿ ಕೊರಮ, ಕೊರಚ, ಕುರುವನ್, ಕೇಪ್ಮಾರಿಸ್ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿಯ ನಿಯೋಗವು ಬುಧವಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿ ವಿಚಾರಣಾ ಆಯೋಗಕ್ಕೆ ಕೆಲವು ಮನವಿ ಮಾಡಿದೆ.

“ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿರುವ De-notified communities (DNTs) ವಿಮುಕ್ತ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ವರ್ಗವನ್ನು ಸೃಷ್ಟಿಸಬೇಕು ಆ ವರ್ಗದಲ್ಲಿ ಕೊರಮ, ಕೊರಮ, ಕುರವನ್ ಮತ್ತು ಕೇಪ್ ಮಾರಿಸ್ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಹಿಂದುಳಿದಿರುವಿಕೆಯನ್ನು ಪರಿಗಣಿಸಿ, ಸಮಾನವಾಗಿ ಹಿಂದುಳಿದಿರುವ ಜಾತಿಗಳನ್ನು ಒಂದೇ ವರ್ಗದಲ್ಲಿ ಸೇರಿಸಿ ಸಮರ್ಪಕ ಮೀಸಲಾತಿ (Adequate Representation) ಆಧಾರದಲ್ಲಿ ಶೇ.6 ಹೆಚ್ಚುವರಿ ಒಳಮೀಸಲಾತಿ ನೀಡಬೇಕು” ಎಂದು ಕೋರಿದೆ.

“ಪರಿಶಿಷ್ಟ ಜಾತಿಯಲ್ಲಿರುವ ಸಮುದಾಯಗಳಲ್ಲಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅತಿ ಹಿಂದುಳಿದ ಮಾದರಿಯಲ್ಲಿ ವರ್ಗಗಳನ್ನು ಸೃಜಿಸಬೇಕು ಇದು ಜಾತಿ- ಉಪಜಾತಿ ಗುಂಪುಗಳಾಗಬಾರದು” ಎಂದು ನಿಯೋಗ ಮನವಿ ಮಾಡಿದೆ.

Advertisements

ನ್ಯಾಯಮೂರ್ತಿ ನಾಗಮೋಹನ್ ದಾಸ್ “ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಪರಿಶೀಲಸಿ, ನಿರ್ಧರಿಸಲಾಗುವುದು” ಎಂದು ನಿಯೋಗಕ್ಕೆ ಭರವಸೆ ನೀಡಿದರು.

ನಿಯೋಗದಲ್ಲಿ ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮದ ಮಾಜಿ ಉಪಾಧ್ಯಕ್ಷ ಎಂ.ವೆಂಕಟೇಶ್, ವಕೀಲರಾದ ಕಿರಣ್ ಕುಮಾರ್ ಕೊತ್ತಗೆರೆ, ಮಹದೇವು ಚಾಮರಾಜನಗರ, ಗಂಗಾಧರ್, ನೆಲಮಂಗಲ, ಮಲ್ಲೇಶ್, ರವಿ‌ಮಹದೇವು ಬೆಂಗಳೂರು, ಮನ್ಮಂಥ್, ಹಾಗೂ ಮಹಿಳಾ ಮುಖಂಡರಾದ ಭೀಮಪುತ್ರಿ ನಾಗಮ್ಮ, ಚಂದ್ರಿಕಾ, ಸಂಶೋಧಕರಾದ ಡಾ.ರಾಜೇಶ್ ಹಾಗೂ ವಿವಿಧ ಜಿಲ್ಲೆಗಳ ಕುಳುವ (ಕೊರಮ-ಕೊರಚ) ಸಮಾಜದ ವಿವಿಧ ಸಂಘಟನೆಯ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X