ನ್ಯಾ. ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿದ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿ, ಬೇಡಿಕೆ ಈಡೇರಿಕೆಗೆ ಮನವಿ

Date:

ಕರ್ನಾಟಕ ಪರಿಶಿಷ್ಟ ಜಾತಿ ಕೊರಮ, ಕೊರಚ, ಕುರುವನ್, ಕೇಪ್ಮಾರಿಸ್ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿಯ ನಿಯೋಗವು ಬುಧವಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿ ವಿಚಾರಣಾ ಆಯೋಗಕ್ಕೆ ಕೆಲವು ಮನವಿ ಮಾಡಿದೆ.

- Advertisement -

“ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿರುವ De-notified communities (DNTs) ವಿಮುಕ್ತ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ವರ್ಗವನ್ನು ಸೃಷ್ಟಿಸಬೇಕು ಆ ವರ್ಗದಲ್ಲಿ ಕೊರಮ, ಕೊರಮ, ಕುರವನ್ ಮತ್ತು ಕೇಪ್ ಮಾರಿಸ್ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಹಿಂದುಳಿದಿರುವಿಕೆಯನ್ನು ಪರಿಗಣಿಸಿ, ಸಮಾನವಾಗಿ ಹಿಂದುಳಿದಿರುವ ಜಾತಿಗಳನ್ನು ಒಂದೇ ವರ್ಗದಲ್ಲಿ ಸೇರಿಸಿ ಸಮರ್ಪಕ ಮೀಸಲಾತಿ (Adequate Representation) ಆಧಾರದಲ್ಲಿ ಶೇ.6 ಹೆಚ್ಚುವರಿ ಒಳಮೀಸಲಾತಿ ನೀಡಬೇಕು” ಎಂದು ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಪರಿಶಿಷ್ಟ ಜಾತಿಯಲ್ಲಿರುವ ಸಮುದಾಯಗಳಲ್ಲಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅತಿ ಹಿಂದುಳಿದ ಮಾದರಿಯಲ್ಲಿ ವರ್ಗಗಳನ್ನು ಸೃಜಿಸಬೇಕು ಇದು ಜಾತಿ- ಉಪಜಾತಿ ಗುಂಪುಗಳಾಗಬಾರದು” ಎಂದು ನಿಯೋಗ ಮನವಿ ಮಾಡಿದೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ “ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಪರಿಶೀಲಸಿ, ನಿರ್ಧರಿಸಲಾಗುವುದು” ಎಂದು ನಿಯೋಗಕ್ಕೆ ಭರವಸೆ ನೀಡಿದರು.

ನಿಯೋಗದಲ್ಲಿ ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮದ ಮಾಜಿ ಉಪಾಧ್ಯಕ್ಷ ಎಂ.ವೆಂಕಟೇಶ್, ವಕೀಲರಾದ ಕಿರಣ್ ಕುಮಾರ್ ಕೊತ್ತಗೆರೆ, ಮಹದೇವು ಚಾಮರಾಜನಗರ, ಗಂಗಾಧರ್, ನೆಲಮಂಗಲ, ಮಲ್ಲೇಶ್, ರವಿ‌ಮಹದೇವು ಬೆಂಗಳೂರು, ಮನ್ಮಂಥ್, ಹಾಗೂ ಮಹಿಳಾ ಮುಖಂಡರಾದ ಭೀಮಪುತ್ರಿ ನಾಗಮ್ಮ, ಚಂದ್ರಿಕಾ, ಸಂಶೋಧಕರಾದ ಡಾ.ರಾಜೇಶ್ ಹಾಗೂ ವಿವಿಧ ಜಿಲ್ಲೆಗಳ ಕುಳುವ (ಕೊರಮ-ಕೊರಚ) ಸಮಾಜದ ವಿವಿಧ ಸಂಘಟನೆಯ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...