ಒಳಮೀಸಲಾತಿ | ಸಮೀಕ್ಷೆಗೆ ಸರ್ವರ್ ದೋಷ ಅಡ್ಡಿ; ಗಣತಿದಾರರು ಹೈರಾಣು

Date:

Advertisements

ಒಳಮೀಸಲಾತಿ ಜಾರಿಗಾಗಿ ಹತ್ತು ದಿನಗಳ ಹಿಂದೆ ಆರಂಭವಾದ ಬಹು ನಿರೀಕ್ಷಿತ ‘ಪರಿಶಿಷ್ಟ ಜಾತಿ’ ಸಮೀಕ್ಷೆಗೆ ತಾಂತ್ರಿಕ ದೋಷಗಳು ಅಡ್ಡಿಯುಂಟುಮಾಡುತ್ತಿವೆ. ಸರ್ವರ್ ಸಮಸ್ಯೆ ಮತ್ತು ಅಗತ್ಯ ಮಾನವಶಕ್ತಿಯ ಕೊರತೆಯನ್ನು ಸಮೀಕ್ಷೆ ಪ್ರಕ್ರಿಯೆಯು ಎದುರಿಸುತ್ತಿದೆ. ಇದು ನಾಗರಿಕರು ಕೋಪಗೊಳ್ಳುವಂತೆ ಮಾಡಿದೆ. ಗಣತಿದಾರರನ್ನು ಚಿಂತೆಗೀಡು ಮಾಡಿದೆ.

ಪರಿಶಿಷ್ಟ ಜಾತಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಈ ಸಮೀಕ್ಷೆಯು ನಿರ್ಣಾಯಕವಾಗಿದೆ. ಆದರೆ, ಸಮೀಕ್ಷೆ ಈಗ ಸರ್ವರ್ ಕ್ರ್ಯಾಶ್‌ಗಳು ಮತ್ತು ಸಾಫ್ಟ್‌ವೇರ್ ನಿಧಾನಗತಿಯಂತಹ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದಾಗಿ ಡೇಟಾ ಸಂಗ್ರಹಣೆಯಲ್ಲಿ ಭಾರೀ ವಿಳಂಬವಾಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಸಮೀಕ್ಷೆಗೆ ಒಳಪಡುತ್ತಿರುವ ಜನರು ಸರ್ವರ್ ನಿಧಾನವಾಗಿ ಕೆಲಸ ಮಾಡುತ್ತಿರುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಗೆ ಹೆಚ್ಚು ಸಮಯ ವ್ಯಯವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

ಗಣತಿದಾರರು ಅಸಹಾಯಕರಾಗಿದ್ದಾರೆ. ದೋಷವುಳ್ಳ ಅಪ್ಲಿಕೇಶನ್‌ಗಳು ಮತ್ತು ಓವರ್‌ಲೋಡ್ ಸರ್ವರ್‌ಗಳಿಂದಾಗಿ ಸಮೀಕ್ಷೆಗೆ ಒಳಪಡಿಸುವ ನಿವಾಸಿಗಳನ್ನು ಕೋಪಗೊಳ್ಳುವಂತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

“ಸರ್ಕಾರವು ಇಷ್ಟು ಮುಖ್ಯವಾದ ಸಮೀಕ್ಷೆಯನ್ನು ಈ ರೀತಿ ನಡೆಸಿದರೆ, ಸಮೀಕ್ಷೆಯ ಫಲಿತಾಂಶವನ್ನು ನಾವು ಹೇಗೆ ನಂಬಲು ಸಾಧ್ಯ” ಎಂದು ಸಮೀಕ್ಷೆಗೆ ಒಳಪಟ್ಟ ನಿವಾಸಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

“ಸಮೀಕ್ಷೆಯ ಅಪ್ಲಿಕೇಷನ್‌ನಲ್ಲಿ ತಾಂತ್ರಿಕ ಸಮಸ್ಯೆಯಿತ್ತು. ಈ ಬಗ್ಗೆ ಸರ್ವೇಯರ್‌ಗಳಿಂದ ಅನೇಕ ಕರೆಗಳು ಬಂದಿವೆ. ಆ ಸಮಸ್ಯೆಯನ್ನು ಈಗ ಪರಿಹರಿಸಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಶುಕ್ರವಾರ ಮತ್ತು ಶನಿವಾರ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಆಗ ಗಣತಿದಾರರಿಂದ ನಮಗೆ ಅನೇಕ ದೂರುಗಳು ಬಂದಿದ್ದವು. ಈ ಸಮಸ್ಯೆ ಬಗೆಹರಿದಿದೆ. ದೂರುಗಳ ಸಂಖ್ಯೆ ಕಡಿಮೆಯಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ” ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಆದರೂ, ಸಮೀಕ್ಷೆಯ ನಿಖರತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಅನೇಕರು ಇನ್ನೂ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X