ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

Date:

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.

- Advertisement -

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. “ದೇಶಾದ್ಯಂತ 35 ಕೋಟಿಗೂ ಹೆಚ್ಚು ಮಂದಿ ಎಸ್‌ಸಿ/ಎಸ್‌ಟಿ ಸಮುದಾಯದ ಜನರಿದ್ದೇವೆ. ಎಲ್ಲ ಸಮುದಾಯಗಳು ಮತ್ತು ಒಳ ಪಂಗಡಗಳಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟಗಳು ನಡೆದಿವೆ. ಒಳಮೀಸಲಾತಿಗಾಗಿ ಸದಾಶಿವ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್‌ ಸರ್ಕಾರ ಕಡೆಗಣಿಸಿತು. ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿತು. ಈಗ, ದಾಸ್‌ ಆಯೋಗದ ಶಿಫಾರಸುಗಳನ್ನೂ ಕಡೆಗಣಿಸಿ, ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ಆದರೂ, ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಕಾಂಗ್ರೆಸ್‌ ಹೈಕಮಾಂಡ್‌ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತೇವೆಂದು ಕಾಂಗ್ರೆಸ್‌ ಹೈಕಮಾಂಡ್‌ ನಿರಂತರವಾಗಿ ಹೇಳಿಕೊಂಡು ಬಂದಿದೆ. ಆದರೆ, ನಿರಂತರವಾಗಿ ಎಸ್‌ಸಿ/ಎಸ್‌ಟಿ ಸಮುದಾಯವನ್ನು ವಂಚಿಸಿದೆ. ಒಳಮೀಸಲಾತಿ ಜಾರಿಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ, ಸಮುದಾಯವನ್ನು ವಂಚಿಸುತ್ತಿದೆ. ಫೆಬ್ರವರಿ 27ರ ನಂತರ ಸಚಿವ ಸಂಪುಟ ಸಭೆಯನ್ನೇ ನಡೆಸದೆ, ಮುಂದೂಡಲಾಗಿದೆ. ಈಗ, ಈ ತಿಂಗಳ ಕೊನೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದು ಅನ್ಯಾಯ. ಸರ್ಕಾರವು ಎಚ್ಚೆತ್ತುಕೊಂಡು ಒಳಮೀಸಲಾತಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ನೇಮಕಾತಿಯ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...