ಶೇ.80ರಷ್ಟು ರೈತರು ಭೂಮಿ ಕೊಡಲ್ಲ ಎನ್ನುವಾಗ ಸಿದ್ದು ಸರ್ಕಾರಕ್ಕೆ ಕಿವಿಯಿಲ್ಲವೇ: ದರ್ಶನ್‌ ಪಾಲ್‌

Date:

Advertisements

2013ರಲ್ಲಿ ಕೆಲವು ರಾಜ್ಯ ಸರಕಾರಗಳು ಭೂಸ್ವಾಧೀನ ಕಾಯಿದೆ ಅಂಗೀಕರಿಸಿವೆ. ಸರಕಾರ ಕೈಗಾರಿಕ ಉದ್ದೇಶಕ್ಕೆ ಸ್ವಾಧೀನ ಮಾಡಿಕೊಳ್ಳಬೇಕಾದರೆ, ಶೇ.70ರಷ್ಟು ಜನ ರೈತರು ಒಪ್ಪಿಗೆ ನೀಡಬೇಕು. ಜೊತೆಗೆ ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳನ್ನು ಒಳಗೊಳ್ಳಬೇಕು ಎಂದು ಹೇಳುತ್ತದೆ. ಆದರೆ, ದೇವನಹಳ್ಳಿಯಲ್ಲಿ ಶೇ.80ರಷ್ಟು ಜನ ಭೂಮಿ ಕೊಡಲ್ಲ ಅಂತ ಬರೆದುಕೊಟ್ಟಿದ್ದಾರೆ. ಸರ್ಕಾರಕ್ಕೆ ಕಿವಿಯಿಲ್ಲವೇ ಎಂದು ಸಂಯಕ್ತ ಕಿಸಾನ್‌ ಮೋರ್ಚಾದ ನಾಯಕ ದರ್ಶನ್‌ ಪಾಲ್‌ ಟೀಕಿಸಿದರು.

ಬೆಂಗಳೂರು ಗ್ರಾಮಾಂತಾರ ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನ ಭೂಸ್ವಾಧೀನವಿರೋಧಿಸಿ 1185 ದಿನಗಳ ಹೋರಾಟಕ್ಕೆ ಬೆಂಬಲ ಘೋಷಿಸಿ ಮಾತನಾಡಿದರು.

“ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗದು. ನಾನು ಸಂಯಕ್ತ ಕಿಸಾನ್‌ ಮೋರ್ಚಾದ ಪರವಾಗಿ ಇಲ್ಲಿನ ರೈತರ ಪರವಾಗಿ ಬಂದಿದ್ದೇನೆ. 2020ನ 20ರಂದು ದೆಹಲಿಯಲ್ಲಿ ಸೇರಿದಂತೆ ರೈತಸಂಘಟನೆಗಳ ಒಕ್ಕೂಟ ಒಂದು ಹೋರಾಟಟ ನಡೆಸಲು ತೀರ್ಮಾನ ಮಾಡುತ್ತದೆ. ಮೋದಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಮುಂದಾಗಿತ್ತು. ಕಾನೂನಿನ ವಿರುದ್ಧ 13ತಿಂಗಳ ಸುದೀರ್ಘ ಹೊರಾಟಕ್ಕೆ ಮಣಿದ ಮೋದಿ ಸರಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ಸು ಪಡೆದುಕೊಂಡಿತು. ಅದೇ ಉತ್ಸಾಹದಲ್ಲಿ ಈ ಹೋರಾಟವೂ ನಡೆಯುತ್ತಿದೆ” ಎಂದರು.

Advertisements

“ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಕಡಿಮೆ ಸಮಯವಲ್ಲ. ಈ ಸುದೀರ್ಘ ಹೋರಾಟಕ್ಕೆ ಸಂಯುಕ್ತ ಹೋರಾಟ ಬೆಂಬಲ ನೀಡುತ್ತಿದೆ. ಇದರ ಭಾಗವಾಗಿ ರೈತರು ಒಂದಿಂಚು ಭೂಮಿಯನ್ನು ಕೊಡುವುದಿಲ್ಲ ಎಂದು ಒಗ್ಗಟ್ಟಾಗಿ ನಿಂತಿರುವುದು ಅಭಿನಂದನಾರ್ಹವಾದದ್ದು. ಅಲ್ಲಿ ಇರುವ ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷ” ಎಂದು ಹೇಳಿದರು.

“ದೆಹಲಿಯ ಗಡಿಗಳಲ್ಲಿ ಸರಕಾರ ಪ್ರತಿಭಟನೆ ಮಾಡುವಾಗ, ಪಂಜಾಬ್‌ನಲ್ಲಿ ಕಾಂಗ್ರೆಸ್‌ ಸರಕಾರ ಇತ್ತು. ಆಗ ಬಿಜೆಪಿ ಸರಕಾರ ರೈತರ ವಿರುದ್ಧ ದಾಳಿ ಮಾಡುತ್ತಿತ್ತು. ಪಂಜಾಬ್‌ ಸರಕಾರ ಎಲ್ಲ ರೀತಿಯಲ್ಲೂ ನೈತಿಕವಾಗಿ, ಹಣಕಾಸಿನ ಮೂಲಕ ಸೇರಿದಂತೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ 700 ಜನ ರೈತರು ಪ್ರಾಣ ಕಳೆದುಕೊಂಡರು. ಪ್ರಾಣ ಕಳೆದುಕೊಂಡ ರೈತರಿಗೆ ಎಲ್ಲರಿಗೂ ತಲಾ 5 ಲಕ್ಷ ರೂ ಪರಿಹಾರ ಮತ್ತು ಮನೆಗೊಂದು ಸರಕಾರದ ಕೆಲಸ ಕೊಡುತ್ತೇವೆ ಎಂದು ಘೋಷಣೆ ಮಾಡುತ್ತು. ಅದರೆ ಕರ್ನಾಟಕದಲ್ಲಿ ಇಲ್ಲಿನ ಸರಕಾರ ಯಾಕೆ ಹೀಗೆ ಈ ರೀತಿಯಲ್ಲಿ ನಡೆದುಕೊಳ್ಳುತ್ತಿದೆ” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ ಸರಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತ್ತೋ ಅದೇ ರೀತಿ ಕರ್ನಾಟಕದಲ್ಲಿ ಇದೆ. ಸಂಯುಕ್ತ ಕಿಸಾನ್‌ ಮೋರ್ಚಾ ಸಂಘಟನೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರೈತರು ಇದ್ದಾರೆ. ಆದುದರಿಂದ ರಾಜ್ಯದಲ್ಲಿ ಈ ಹೋರಾಟಕ್ಕೆ ಸರಕಾರ ಮಣಿದು, ರೈತರ ಭೂಮಿ ಪಡೆದುಕೊಳ್ಳಲ್ಲ ಎಂದು ಘೋಷಣೆ ಮಾಡದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X