ಉದ್ಯೋಗ ಮಾಹಿತಿ | ಉಡುಪಿಯಲ್ಲಿ ಕೇಂದ್ರ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ

Date:

Advertisements

ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಉಡುಪಿಯ ಮಲ್ಪೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್’ (UCSL) ಕಂಪನಿಯಲ್ಲಿ ಶಾಶ್ವತ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಮಲ್ಪೆಯ ಯುಸಿಎಸ್‌ಎಲ್‌ನಲ್ಲಿ ಖಾಲಿ ಇರುವ 2 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
1. ವ್ಯವಸ್ಥಾಪಕ (ಯೋಜನೆ ಮತ್ತು ವ್ಯವಹಾರ ಅಭಿವೃದ್ಧಿ) – 1 ಹುದ್ದೆ,
2. ಉಪ ವ್ಯವಸ್ಥಾಪಕ (ಇಲೆಕ್ಟ್ರಿಕಲ್ ಡಿಸೈನ್) – 1 ಹುದ್ದೆ ಖಾಲಿ ಇದ್ದು ಅರ್ಹರು ಅರ್ಜಿ ಸಲ್ಲಿಸಬಹುದು.
ವ್ಯವಸ್ಥಾಪಕ ಹುದ್ದೆಯು ಸಾಮಾನ್ಯ ವರ್ಗಕ್ಕೆ ನೀಡಲಾಗಿದ್ದು, ಯಾರು ಬೇಕಿದ್ದರೂ ಅರ್ಜಿ ಸಲ್ಲಿಸಬಹುದು, ಉಪ ವ್ಯವಸ್ಥಾಪಕ ಹುದ್ದೆಯನ್ನು OBC ವರ್ಗಕ್ಕೆ ಮೀಸಲಾತಿ ನೀಡಲಾಗಿದ್ದು, ಒಬಿಸಿ ಸಮುದಾಯದವರು ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸಲು ಆಗಸ್ಟ್‌ 14 ಕಡೆಯ ದಿನವಾಗಿದೆ. https://udupicsl.com ಅಥವಾ www.cochinshipyard.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Advertisements

ವಿದ್ಯಾರ್ಹತೆ: ವ್ಯವಸ್ಥಾಪಕ ಹೆದ್ದೆಗೆ; ಮೆಕಾನಿಕಲ್, ಎಲೆಕ್ಟ್ರಿಕಲ್, ನಾವಲ್ ಆರ್ಕಿಟೆಕ್ಚರ್ ಅಥವಾ ಮೆರೈನ್ ಇಂಜಿನಿಯರಿಂಗ್‌ನಲ್ಲಿ ಕನಿಷ್ಟ 60% ಅಂಕಗಳೊಂದಿಗೆ ಪದವಿ.
ಉಪ ವ್ಯವಸ್ಥಾಪಕಗೆ; ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಅಥವಾ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪದವಿ.

ಅನುಭವ: ವ್ಯವಸ್ಥಾಪಕ: 9 ವರ್ಷಗಳ ಅನುಭವ, ಮತ್ತು ಉಪ ವ್ಯವಸ್ಥಾಪಕ: 7 ವರ್ಷಗಳ ಅನುಭವ
ಎರಡೂ ಹುದ್ದೆಗಳಿಗೆ ಕಡ್ಡಾಯವಾಗಿ ಶಿಪ್ ಬಿಲ್ಡಿಂಗ್, ಶಿಪ್ ರಿಪೇರ್, ಮೆರೈನ್ ಅಥವಾ ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಅನುಭವ ಹೊಂದಿರಬೇಕು.

ವಯೋಮಿತಿ: ವ್ಯವಸ್ಥಾಪಕ: ಗರಿಷ್ಠ 40 ವರ್ಷ, ಉಪ ವ್ಯವಸ್ಥಾಪಕ: ಗರಿಷ್ಠ 35 ವರ್ಷ
ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕರಿಗೆ ಗರಿಷ್ಠ 10 ವರ್ಷ

ಅರ್ಜಿ ಶುಲ್ಕ: ಸಾಮಾನ್ಯ/OBC ಅಭ್ಯರ್ಥಿಗಳಿಗೆ ₹1000 (ಅಪರಿಹಾರ್ಯ), SC/ST ಅಭ್ಯರ್ಥಿಗಳಿಗೆ ಶುಲ್ಕವಿಲ್ಲ

ಆಯ್ಕೆ ವಿಧಾನ: ಅರ್ಹ ಅಭ್ಯರ್ಥಿಗಳಿಗೆ PowerPoint Presentation (30 ಅಂಕ), ಕೆಲಸದ ಅನುಭವ (40 ಅಂಕ), ಗುಂಪು ಚರ್ಚೆ (10 ಅಂಕ), ಮತ್ತು ಸಂದರ್ಶನ (20 ಅಂಕ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X