ಅಗ್ನಿ ದುರಂತ ತಡೆಗೆ ಕ್ರಿಯಾ ಯೋಜನೆ ಸಲ್ಲಿಸಿದ ಕಮಲ್‌ ಪಂತ್

Date:

Advertisements
  • ಹಜ್ ಭವನ ಘಟನೆಯ ಬೆನ್ನಿಗೆ ಸಭೆ ಕರೆದ ಕಂದಾಯ ಸಚಿವರು
  • ಅಗ್ನಿ ದುರಂತ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ವಹಿಸಲು ಕ್ರಮ
  • ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲೇ ಮೂರು ಅಗ್ನಿ ಅನಾಹುತ

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. ಹೀಗಾಗಿ ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು” ಎಂದು ಸಲಹೆ ನೀಡಿದರು.

“ಅತ್ತಿಬೆಲೆ ಪಟಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್, ವೇದಪ್ಪನ್, ಆದಿಕೇಶವನ್, ವಿಜಯರಾಘವನ್, ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ಪ್ರಕಾಶರಾಜ್, ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರು ಮೃತಪಟ್ಟಿದ್ದರು.

Advertisements

ಅಕ್ಟೋಬರ್ 19 ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು. ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಠ 3 ಕೋಟಿ ನಷ್ಟವಾಗಿದೆ. ಎಂದು ಆತಂಕ ಹೊರಹಾಕಿದ ಸಚಿವರು, ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತ್ತೊಂದು ಅಗ್ನಿ ಅವಘಡ; 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳಿಗೆ ಬೆಂಕಿ

“ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, “ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು.

ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಎಂಬ ಕುರಿತು ಶೀಘ್ರದಲ್ಲೇ ಇಲಾಖೆಗೆ ವರದಿ ನೀಡುವುದಾಗಿಯೂ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X