ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

Date:

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ ಪಡೆದಿರುವ ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು, ಅಂಗವಿಕಲರು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತದಾರರು ಇನ್ನು ಮುಂದೆ ಮನೆ ಬಾಗಿಲಲ್ಲೇ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬಹುದಾಗಿದೆ. ಈ ಕುರಿತು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

- Advertisement -

ಈ ಸೌಲಭ್ಯ ಪಡೆಯಲು ಮತದಾರರು ತಮ್ಮ ವ್ಯಾಪ್ತಿಯ ಬೂತ್‌ ಮಟ್ಟದ ಅಧಿಕಾರಿ (BLO) ಅವರನ್ನು ಸಂಪರ್ಕಿಸಬೇಕು. ಬಳಿಕ ಸಹಾಯಕ ಚುನಾವಣಾ ನೋಂದಣಾಧಿಕಾರಿ (AERO) ಅಥವಾ ಚುನಾವಣಾ ನೋಂದಣಾಧಿಕಾರಿ (ERO) ಮತದಾರರ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ, ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

SIR ಅಡಿಯಲ್ಲಿ ‘ಮ್ಯಾಪಿಂಗ್‌ ಆಗದ ಪ್ರಕರಣಗಳು’ ಮತ್ತು ವ್ಯತ್ಯಾಸಗಳಿಗೆ ಸಂಬಂಧಿಸಿದಂತೆ ಒಟ್ಟು 43.81 ಲಕ್ಷ ನೋಟಿಸ್‌ಗಳನ್ನು ನೀಡಲಾಗಿದೆ. ಈ ಪೈಕಿ ಸೆ.15ರವರೆಗೆ 12.56 ಲಕ್ಷ ವಿಚಾರಣೆಗಳು ಪೂರ್ಣಗೊಂಡಿವೆ. ಅಂತಿಮ ವಿಚಾರಣೆ ಅ.12ರಂದು ನಡೆಯಲಿದೆ. ಚುನಾವಣಾ ಆಯೋಗವು ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯ ಪೀಡಿತರು, ಆಸ್ಪತ್ರೆಯಲ್ಲಿರುವವರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ವಿಚಾರಣೆಗೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ಸೌಲಭ್ಯವನ್ನು ಹಲವರು ಈಗಾಗಲೇ ಬಳಸಿಕೊಂಡಿದ್ದಾರೆ.

ಆದರೆ, ದಿನಕ್ಕೆ ಸುಮಾರು 150 ನೋಟಿಸ್‌ಗಳ ವಿಚಾರಣೆ ನಡೆಸಬೇಕಿರುವುದರಿಂದ ಕೆಲವು AEROಗಳು ಮತ್ತು EROಗಳಿಗೆ ತಕ್ಷಣವೇ ಮನೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಪ್ರಕಾರ, ಮನೆ ಭೇಟಿ ನೀಡುವ ಮನವಿಯನ್ನು ಪ್ರಕರಣದ ಅರ್ಹತೆ ಆಧರಿಸಿ ನಿರ್ಧರಿಸುವ ಅಧಿಕಾರ AEROಗಳಿಗೆ ಇದೆ. ಕಳೆದ ಕೆಲವು ದಿನಗಳಿಂದ ಮನೆ ಭೇಟಿಗಳ ಸಂಖ್ಯೆ ಹೆಚ್ಚಾಗಿದೆ.

ಮತದಾರರು ತಮ್ಮ ಕುಟುಂಬದ ಸದಸ್ಯರೊಬ್ಬರನ್ನು ಸಹ ವಿಚಾರಣೆಗೆ ನಿಯೋಜಿಸಬಹುದು. ನಿಯೋಜಿತ ವ್ಯಕ್ತಿಯು ನೋಟಿಸ್‌ ಪ್ರತಿ, ಸ್ವಯಂ ದೃಢೀಕರಿಸಿದ ಆಧಾರ್‌ ಪ್ರತಿ ಹಾಗೂ ಚುನಾವಣಾ ಆಯೋಗ ಅನುಮೋದಿಸಿರುವ ಇತರ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬಹುದು.

ಇದೇ ವೇಳೆ, ಸಿನಿಮಾ, ಕಲೆ, ಕ್ರೀಡೆ, ಮಾಧ್ಯಮ, ನ್ಯಾಯಾಂಗ ಕ್ಷೇತ್ರಗಳ ಗಣ್ಯರು, ಚುನಾಯಿತ ಪ್ರತಿನಿಧಿಗಳು, ಪ್ರಮುಖ ನಾಗರಿಕರು ಹಾಗೂ ಸಾರ್ವಜನಿಕ ಹುದ್ದೆ ಹೊಂದಿರುವವರ ಹೆಸರುಗಳನ್ನು ದಾಖಲೆಗಳ ಪರಿಶೀಲನೆಯ ಬಳಿಕ ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಆಯೋಗ ತಿಳಿಸಿದೆ. ಇವರಿಗೆ ಪ್ರತ್ಯೇಕ ವಿಚಾರಣಾ ನೋಟಿಸ್‌ ನೀಡುವ ಬದಲು AEROಗಳು ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ.

ಗಣ್ಯರಿಗೆ ನೀಡಿರುವ ಈ ‘ಆದ್ಯತೆಯ’ ಸೌಲಭ್ಯವನ್ನು ಆಕ್ಷೇಪಿಸಿರುವ ಆ್ಯಂಟಿ-SIR ವೇದಿಕೆ, ವ್ಯತ್ಯಾಸ ಕಂಡುಬಂದಿರುವ ಸಾಮಾನ್ಯ ಮತದಾರರಿಗೆ ವಿಚಾರಣೆಗೆ ಹಾಜರಾಗಲು ಕಡಿಮೆ ಸಮಯ ನೀಡಲಾಗುತ್ತಿದೆ ಎಂದು ಆರೋಪಿಸಿದೆ. ದಾಖಲೆಗಳ ಬೇಡಿಕೆ ಬಡವರು ಮತ್ತು ಅಂಚಿನಲ್ಲಿರುವ ಜನರ ಮೇಲೆ ಹೆಚ್ಚಿನ ಹೊರೆ ಉಂಟುಮಾಡುತ್ತಿದೆ ಎಂದೂ ವೇದಿಕೆ ಹೇಳಿದೆ. ನೋಟಿಸ್‌ ವಿತರಣೆ ವಿಳಂಬವಾಗುತ್ತಿರುವುದನ್ನೂ ಅದು ಪ್ರಶ್ನಿಸಿದೆ.

ಇದನ್ನೂ ಓದಿ: ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಗ್ರಾಮೀಣ ಪ್ರದೇಶಗಳಲ್ಲಿ BLOಗಳು ಮತದಾರರನ್ನು ವೈಯಕ್ತಿಕವಾಗಿ ಪರಿಚಯ ಹೊಂದಿರುವುದರಿಂದ ಪ್ರಕ್ರಿಯೆ ಸುಗಮವಾಗಿದೆ. ನಗರ ಪ್ರದೇಶಗಳಲ್ಲಿ BLOಗಳಿಗೆ ಎಲ್ಲ ಮತದಾರರ ಪರಿಚಯವಿಲ್ಲದ ಕಾರಣ ದಾಖಲೆಗಳನ್ನು ಕೇಳಲಾಗುತ್ತಿದೆ. BLOಗಳ ಪ್ರತಿಕ್ರಿಯೆ ಆಧರಿಸಿ EROಗಳು ಅನುಮೋದನೆ ನೀಡುತ್ತಿದ್ದಾರೆ ಎಂದು ಜಾಗೃತ ಕರ್ನಾಟಕದ ಮುತ್ತುರಾಜ್‌ ಮಾಹಿತಿ ನೀಡಿದ್ದಾರೆ.

ಜನನ ಪ್ರಮಾಣಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ ಇಲ್ಲದಿದ್ದರೆ, 7ನೇ ತರಗತಿಯ ವರ್ಗಾವಣೆ ಪ್ರಮಾಣಪತ್ರ, ಆಧಾರ್‌ ಮತ್ತು ಪ್ಯಾನ್‌ ಕಾರ್ಡ್‌ಗಳನ್ನೂ ಕೆಲವು ಕಡೆಗಳಲ್ಲಿ ಸ್ವೀಕರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಚಾರಣೆಗಳು ಪೂರ್ಣಗೊಂಡ ಬಳಿಕ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಅರ್ಜಿಗಳ ಪರಿಶೀಲನೆ, ಬಾಕಿ ವಿಚಾರಣೆಗಳು ಹಾಗೂ ಮನೆ ಭೇಟಿಗಳನ್ನು ಪೂರ್ಣಗೊಳಿಸುವ ಕಾರ್ಯ ನಡೆಯಲಿದೆ. ನಂತರ ಅ.27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಆಯೋಗ ಸಿದ್ಧತೆ ನಡೆಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...