ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ ಕೆ ಶಿವಕುಮಾರ್

Date:

ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

- Advertisement -

ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈಗ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಎತ್ತರಕ್ಕೆ ಬೆಳೆದಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ ದೊಡ್ಡ ಸಂದೇಶ ರವಾನಿಸಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ಪರವಾಗಿ ದಿಟ್ಟ ಹೋರಾಟ ಆರಂಭಿಸಿದ್ದಾರೆ. ದೇಶಾದ್ಯಂತ ಮತ ಅಕ್ರಮ ಬಯಲಿಗೆಳೆಯಲು ಕರ್ನಾಟಕದಲ್ಲಿ ಮುನ್ನುಡಿ ಬರೆಯುತ್ತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ಮಾನವ ಹಕ್ಕು ವಿಭಾಗದ ಸಭೆಯಲ್ಲಿ ರಾಹುಲ್ ಗಾಂಧಿ ಅವರು, ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ರಕ್ಷಣೆ ಮಾಡಲು, ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಇರುವಂತೆ ಪ್ರತಿ ಕ್ಷೇತ್ರದಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಖಾಸಗಿ ಹೊಟೇಲ್ ನಲ್ಲಿ ಸುದ್ದಿ ಸಂಸ್ಧೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರು. ದೇಶ, ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣಾ ವ್ಯವಸ್ಥೆ, ಮತದಾರರ ರಕ್ಷಣೆಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಅಧ್ಯಯನ ಮಾಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಆಂತರಿಕ ಸಂಶೋಧನಾ ತಂಡವನ್ನು ಹೊಂದಿದೆ. ಅದು ಚುನಾವಣೆ ಅಕ್ರಮಗಳ ಬಗ್ಗೆ ಸಂಶೋಧನೆ ಮುಂದುವರೆಸಿದೆ ಎಂದರು.

“ಬಿಜೆಪಿಯವರು ಚಿಲುಮೆ ಸಂಸ್ಥೆ ಮೂಲಕ ತಮ್ಮ 8 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಎಲ್ಓ ಗಳಾಗಿ ನೇಮಿಸಿತ್ತು. ಇದರ ವಿರುದ್ಧ ಹೋರಾಟ ಮಾಡಿ ನಾವು ನಿಯಂತ್ರಣ ಮಾಡಿದೆವು. ಚುನಾವಣೆ ಫಲಿತಾಂಶದ ಸಂದರ್ಭದಲ್ಲೇ ದೂರು ನೀಡಬೇಕಿತ್ತು. ಆದರೆ ದೇಶದಲ್ಲಿ ಇದುವರೆಗೂ ಚುನಾವಣಾ ದೂರುಗಳು ಇತ್ಯರ್ಥವಾಗಿಲ್ಲ. ಹೀಗಾಗಿ ನಾವು ಅದನ್ನು ಬಿಟ್ಟಿದ್ದೆವು. ಈಗ ಜನರ ಮುಂದೆ ಈ ಅಕ್ರಮಗಳನ್ನು ಬಹಿರಂಗಪಡಿಸಲು ತೀರ್ಮಾನಿಸಿದ್ದೇವೆ. ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಈ ಅಕ್ರಮಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸುತ್ತಿದ್ದಾರೆ. ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟ ಪಕ್ಷದ ಮುಖಂಡರಾಗಿ ಅವರು ಧ್ವನಿ ಎತ್ತುತ್ತಿದ್ದಾರೆ. ನಮ್ಮ ಹಕ್ಕು, ನಮ್ಮ ಪ್ರಜಾಪ್ರಭುತ್ವವನ್ನು ನಾವು ಕಾಪಾಡಬೇಕು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...