ಕೊಪ್ಪಳ | ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಎಲ್ಲ 9 ಆರೋಪಿಗಳು ಖುಲಾಸೆ

Date:

ಒಂದು ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ 9 ಜನ ಆರೋಪಿಗಳನ್ನು ನಿರಪರಾಧಿಗಳು ಎಂದು ನ್ಯಾಯಾಲಯ ಆದೇಶ ನೀಡಿದೆ.

- Advertisement -

ಆಗಲೂ ಸಚಿವರಾಗಿದ್ದ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಿವರಾಜ ತಂಗಡಗಿ ರಾಜೀನಾಮೆಗೂ ಯಲ್ಲಾಲಿಂಗನ ಕೊಲೆ ಪ್ರಕರಣ ಕಾರಣವಾಗಿತ್ತು. ಜಿಲ್ಲಾ ನ್ಯಾಯಾಲಯ ಸೆ. 24ರಂದು ಪ್ರಕರಣದ ಅಂತಿಮ ವಿಚಾರಣೆ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದ್ದು, ಯಲ್ಲಾಲಿಂಗನದ್ದು ಕೊಲೆ ಅಲ್ಲ; ಆತ್ಮಹತ್ಯೆ ಎಂದು ಅವರ ಸ್ವಂತ ಸಹೋದರನೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಅವರನ್ನು ನಿರ್ದೋಷಿ ಎಂದು ಹೇಳಿದೆ ಎಂದು ಆರೋಪಿಗಳು ಎನಿಸಿದ್ದ ಪರ ವಕೀಲ ಗಂಗಾಧರ ಮಾಧ್ಯಮಗಳಿಗೆ ತಿಳಿಸಿದರು.

ಪ್ರಕರಣದ ಆರೋಪಿಗಳಾಗಿದ್ದ ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ, ಬಾಳನಗೌಡ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್, ನಂದೀಶ, ಪರಶುರಾಮ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಬಂದಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ

ಏನಿದು ಘಟನೆ: ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ. ಇದಾದ ಬಳಿಕ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.

ಇದು ಮೊದಲು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನಮೇಶ ನಾಯಕ ಸೇರಿ 9 ಜನರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿತ್ತು.‌ ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು ಈಗ ನ್ಯಾಯಾಲಯದ ಈ ಆದೇಶ ನೀಡಿದೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...