ಕೆಟ್ಟ ಪದ ಬಳಸಿದ್ದಾರೆ, ನೋವಾಗಿದೆ: ಕಣ್ಣೀರು ಹಾಕಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

Advertisements
  • ಬಿಜೆಪಿಯಲ್ಲಿದ್ದ ಮಹಿಳೆಯರು ಕೂಡಾ ನನ್ನ ಪರ ನಿಲ್ಲಲಿಲ್ಲ
  • ಪರಿಷತ್ ಬುದ್ಧಿವಂತರ ಚಾವಡಿ, ಅಲ್ಲಿ ಎಲ್ಲರೂ ಧೃತರಾಷ್ಟ್ರ ಆಗಬಾರದು

ನಾನು ಒಬ್ಬಳು ತಾಯಿ. ಹೆಣ್ಣುಮಗಳು. ಸಿ ಟಿ ರವಿ ಹೇಳಿಕೆಯಿಂದ ನನಗೆ ಅವಮಾನವಾಗಿದೆ, ನಾನು ದುಃಖಿತಳಾಗಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಬೆಳಗಾವಿಯ ಕುವೆಂಪು ನಗರದಲ್ಲಿರುವ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ನಿನ್ನೆ ಸದನದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕ‌ರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸುತ್ತಿದ್ದೆವು. ಸದನವನ್ನು ಸಭಾಪತಿ 10 ನಿಮಿಷಗಳ ಕಾಲ ಮುಂದೂಡಿದ್ದರು. ನಾನು ಸದನದಲ್ಲಿ ನನ್ನ ಆಸನದಲ್ಲಿ ಕುಳಿತಿದ್ದೆ. ಆ ಸಂದರ್ಭದಲ್ಲಿ ಎಂಎಲ್‌ಸಿ ಸಿ.ಟಿ. ರವಿ ಅವರು ನನಗೆ ಕೆಟ್ಟ ಪದ ಬಳಸಿದ್ದಾರೆ. ಇದರಿಂದ ನನಗೆ ಬಹಳ ನೋವಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

Advertisements

ಸಿ. ಟಿ. ರವಿ ಅವರು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಡ್ರಗ್ ವ್ಯಸನಿ ಎಂದು ಹೇಳಿದಾಗ ನಾನು ಕೂಡ ಸಿ.ಟಿ. ರವಿ ಅವರಿಗೆ ನೀವು ಕೂಡಾ ಮಾಡಿದ ಅಪಘಾತ ಪ್ರಕರಣಕ್ಕೆ ನಿಮ್ಮನ್ನು ಕೊಲೆಗಡುಕ ಎನ್ನಬಹುದಾ ಎಂದಾಗ ಅವರು ನನಗೆ ಆ ಕೆಟ್ಟ ಪದವನ್ನು ಪ್ರಯೋಗಿಸಿದರು. ಆದರೆ ಈ ಹೇಳಿಕೆಯಿಂದ ನನಗೆ ಸಾಕಷ್ಟು ನೋವಾಗಿದ್ದು, ಬಿಜೆಪಿಯಲ್ಲಿದ್ದ ಮಹಿಳೆಯರು ಕೂಡ ನನ್ನ ಪರ ನಿಲ್ಲದಿರುವುದು ನನಗೆ ಬಹಳ ನೋವು ತಂದಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು

ವಿಧಾನ ಪರಿಷತ್ ಬುದ್ಧಿವಂತರ ಚಾವಡಿ. ಅಲ್ಲಿ ಎಲ್ಲರೂ ಧೃತರಾಷ್ಟ್ರ ಆಗಬಾರದಿತ್ತು. ನಾನು ಕೂಡಾ ಒಬ್ಬ ತಾಯಿ. ಅಕ್ಕ, ಅತ್ತೆ. ನನ್ನನ್ನು ನೋಡಿ ಸಾವಿರಾರು ಮಹಿಳೆಯರು ನಾವು ರಾಜಕಾರಣಕ್ಕೆ ಬರಬೇಕೆಂದುಕೊಂಡಿರುತ್ತಾರೆ. ಆದರೆ ಸದನದಲ್ಲಿ ಆದ ಪರಿಸ್ಥಿತಿಯಲ್ಲಿ ಒಬ್ಬ ಮಹಿಳೆಗೆ ಈ ರೀತಿ ಅಪಮಾನ ಮಾಡಿದ್ದು ಸರಿಯಲ್ಲ ಎಂದು ಸಚಿವೆ ದುಃಖ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X