ಮಂಡ್ಯ, ಯಾದಗಿರಿಯಲ್ಲಿ ಲಿಥಿಯಂ ಸಂಪನ್ಮೂಲ ಪತ್ತೆ: ಕೇಂದ್ರ ಸಚಿವ

Date:

Advertisements

ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.

ರಾಜ್ಯಸಭೆಯಲ್ಲಿ ಗುರುವಾರ ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್, ‘ಲಿಥಿಯಂ ಸಂಪನ್ಮೂಲಗಳನ್ನು ಗುರುತಿಸಲು ಮತ್ತು ಅಂದಾಜು ಮಾಡಲು ಯಾದಗಿರಿ ಜಿಲ್ಲೆಯಲ್ಲಿ ಪ್ರಾಥಮಿಕ ಸಮೀಕ್ಷೆ ಮತ್ತು ಸೀಮಿತ ಭೂಗರ್ಭದ ಅನ್ವೇಷಣೆಯನ್ನು ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಮರಳಗಾಲ – ಅಲ್ಲಾಪಟ್ಟಣ ಪ್ರದೇಶದಲ್ಲಿ 1600 ಟನ್‌ಗಳಷ್ಟು ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ’ ಎಂದರು.

ಆಧುನಿಕ ತಂತ್ರಜ್ಞಾನದಲ್ಲಿ ಲಿಥಿಯಂ ಲೋಹವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ಸೆರಾಮಿಕ್ಸ್, ಗ್ಲಾಸ್, ದೂರ ಸಂಪರ್ಕ ಹಾಗೂ ಏರೋಸ್ಪೇಸ್ ಉದ್ಯಮದಲ್ಲಿ ಇದನ್ನು ಬಳಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಪರಮಾಣು ಶಕ್ತಿ ಇಲಾಖೆಯ ವಿಭಾಗವಾದ ಅನ್ವೇಷಣೆ ಮತ್ತು ಸಂಶೋಧನೆಯ ಪರಮಾಣು ಖನಿಜಗಳ ನಿರ್ದೇಶನಾಲಯ(ಎಎಂಡಿ) ಲಿಥಿಯಂಅನ್ನು ಪತ್ತೆ ಮಾಡಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಭಾಗಗಳಲ್ಲಿನ ಸಂಭಾವ್ಯ ಭೂವೈಜ್ಞಾನಿಕ ಸ್ಥಳಗಳಲ್ಲಿ ಎಎಂಡಿ ಲಿಥಿಯಂಗಾಗಿ ಸಂಶೋಧನೆ ನಡೆಸುತ್ತಿದೆ. ರಾಜಸ್ಥಾನ, ಬಿಹಾರ ಮತ್ತು ಆಂಧ್ರಪ್ರದೇಶದಲ್ಲಿರುವ ಪ್ರಮುಖ ಸ್ಥಳಗಳು ಮತ್ತು ಒಡಿಶಾ, ಛತ್ತೀಸ್‌ಗಢ, ಕರ್ನಾಟಕದಲ್ಲಿನ ಕೆಲವು ಪ್ರದೇಶಗಳಲ್ಲಿ ಲಿಥಿಯಂ ಸಂಪನ್ಮೂಲಗಳಿವೆ ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X