ಮಂಡ್ಯ | ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಪೋಷಕರ ವಿರೋಧ, 84 ಮಕ್ಕಳು ಬೇರೆ ಶಾಲೆಗೆ ದಾಖಲು

Date:

Advertisements

ಮಕ್ಕಳಲ್ಲಿ ಪೌಷ್ಠಿಕ ಆಹಾರ ವೃದ್ಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಚಿಕ್ಕಿ ನೀಡುತ್ತಿದೆ. ಆದರೆ, ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ಧಾರ್ಮಿಕ ಆಚರಣೆ ನೆಪವೊಡ್ಡಿ ಮೊಟ್ಟೆ ವಿತರಣೆ ವಿರೋಧಿಸಿ ಪೋಷಕರು 84 ವಿದ್ಯಾರ್ಥಿಗಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ.

ಶಾಲೆಯ ಪಕ್ಕದಲ್ಲೇ ವೀರಭದ್ರೇಶ್ವರ ದೇವಾಲಯ ಇದೆ. ಹೀಗಾಗಿ ಶಾಲೆಯಲ್ಲಿ ಮೊಟ್ಟೆ ಬೇಯಿಸಬೇಡಿ ಎಂದು ಸವರ್ಣೀಯ ಸಮುದಾಯದ ಪೋಷಕರು ಆಗ್ರಹಿಸಿದ್ದರು. ದೇವಸ್ಥಾನ ಆವರಣದಲ್ಲಿ ಮೊಟ್ಟೆ ಬೇಯಿಸುವುದು ಧಾರ್ಮಿಕ ನಂಬಿಕೆ ಮಸಿಬಳಿದಂತೆ. ಹೀಗಾಗಿ ಮೊಟ್ಟೆಯನ್ನು ಇಲ್ಲಿ ಬೇಯಿಸಬೇಡಿ ಎಂದು ಎನ್ನುವ ಒತ್ತಾಯವೂ ಇತ್ತು ಎನ್ನಲಾಗಿದೆ.

ಅಧಿಕಾರಿಗಳು ನಿಯಮದಂತೆ ಶಾಲೆಯಲ್ಲಿ ಮೊಟ್ಟೆ ವಿತರಣೆ ಆರಂಭಿಸಿದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಈಗ ಅಕ್ಕಪಕ್ಕದ ಕೀಲಾರ, ಹನಕೆರೆ ಹಾಗೂ ಬೆಸರಗರಹಳ್ಳಿ ಸರ್ಕಾರಿ ಶಾಲೆಗೆ ದಾಖಲಿಸಿದ್ದಾರೆ. ಶಾಲೆಯಲ್ಲಿ ಮೊಟ್ಟೆ ವಿತರಣೆ ವಿಚಾರವಾಗಿ ಇಲ್ಲಿ ಹಿಂದಿನಿಂದಲೂ ಭಿನ್ನಾಭಿಪ್ರಾಯಗಳು ಮೂಡಿದ್ದು, 124 ವಿದ್ಯಾರ್ಥಿಗಳ ಪೈಕಿ 84 ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಬಿಟ್ಟಿದ್ದಾರೆ.

Advertisements

ದೇವಸ್ಥಾನದ ಸುತ್ತಮುತ್ತ ಮಾಂಸಾಹಾರ ಮತ್ತು ಮೊಟ್ಟೆಯನ್ನು ನಿಷೇಧಿಸಲಾಗಿದೆ. ಆದ್ದರಿಂದ ಶಾಲೆಯಲ್ಲಿಯೂ ಮೊಟ್ಟೆ ವಿತರಿಸಬಾರದು ಎಂದು ಪೋಷಕರು ಆಗ್ರಹಿಸಿದ್ದರು. ಈ ಕಾರಣಕ್ಕೆ ಶಾಲೆಯಲ್ಲಿ ಮೊಟ್ಟೆ ವಿತರಣೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ನಿಲ್ಲಿಸಿತ್ತು. ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಮತ್ತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದರಿಂದ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

“ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ದೇವಾಲಯ ಇರುವುದರಿಂದ ಕೊಡಬಾರದು, ಮನೆಗೆ ಕೊಟ್ಟು ಕಳುಹಿಸಲಿ ಎಂದಿದ್ದೆವು. ಬೇಯಿಸಿ ಕೊಡಬೇಕು ಎಂದು ಕೆಲವರು ಪಟ್ಟು ಹಿಡಿದಿದ್ದರು. ಆಚಾರ ವಿಚಾರಕ್ಕೆ ಅಡೆತಡೆ ಆಗುತ್ತದೆ. ಹೀಗಾಗಿ ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದೇವೆ” ಎನ್ನುತ್ತಾರೆ ಎಸ್‌ಡಿಎಂಸಿ ಸದಸ್ಯ ಚಂದ್ರು ಆಲಕೆರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X