ಮಂಡ್ಯ: ದೇಗುಲಕ್ಕೆ ದಲಿತರು ಬಂದರೆಂದು ಉತ್ಸವ ಮೂರ್ತಿಯನ್ನೇ ಹೊರತಂದ ಸವರ್ಣೀಯರು

Date:

Advertisements

ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ದೇಗುಲದಿಂದ ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಸವರ್ಣೀಯರು ಆಚೆ ಎಸೆಸಿರುವ ಅಮಾನುಷ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.

ಸದ್ಯ ಹನಕೆರೆ ಗ್ರಾಮ ಬೂದಿಮುಚ್ಚಿದ ಕೆಂಡದಂತಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕಳೆದ 2 ವರ್ಷಗಳ ಹಿಂದೆ ದೇವಾಲಯ ಪುನರ್ ನಿರ್ಮಾಣ ಮಾಡಲಾಗಿದೆ. ಬಳಿಕ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ದೇಗುಲ ಸೇರುತ್ತಿದ್ದಂತೆ ದಲಿತರ ಪ್ರವೇಶಕ್ಕೆ ಸವರ್ಣೀಯರು ಒಪ್ಪುತ್ತಿಲ್ಲ. ಈ ಕುರಿತಾಗಿ ಈಗಾಗಲೇ ಎರಡು ಬಾರಿ ನಡೆಸಿದ ಶಾಂತಿ ಸಭೆಯೂ ವಿಫಲವಾಗಿದೆ.

ದಲಿತರು ದೇಗುಲ ಪ್ರವೇಶಕ್ಕೆ ಸವರ್ಣೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಗುಲ ಅವರೇ ಇಟ್ಟುಕೊಳ್ಳಲಿ, ದೇವರನ್ನ ತೆಗುದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ. ಈ ಮಧ್ಯೆ ಪೊಲೀಸರ ಭದ್ರತೆ ನಡುವೆ ದಲಿತರು ದೇಗುಲ ಪ್ರವೇಶಿಸಿದ್ದಾರೆ.
ಇನ್ನು ಮಾಜಿ ಶಾಸಕ ಎಂ ಶ್ರೀನಿವಾಸ್​ ಸವರ್ಣೀಯರ ಮನವೊಲಿಸಲು ಯತ್ನಿಸಿದ್ದಾರೆ. ತಹಶಿಲ್ದಾರ್, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಮನವೊಲಿಕೆಗೆ ಯತ್ನಿಸಿದ್ದು, ಯಾರ ಮನವಿಗೂ ಗ್ರಾಮಸ್ಥರು ಸ್ಪಂದಿಸುತ್ತಿಲ್ಲ. ಕೊನೆಗೆ ಸರ್ಕಾರಿ ಅಧಿಕಾರಿಗಳು ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ದಲಿತರ ದೇವಾಲಯ ಪ್ರವೇಶಿಸುತ್ತಿದ್ದಂತೆ ಇನ್ನು ಮುಂದೆ ನಾವು ದೇವಾಲಯ ಪ್ರವೇಶ ಮಾಡಲ್ಲ ಎಂದು ಸವರ್ಣೀಯರು ಹೇಳಿದ್ದಾರೆ. ಸದ್ಯಕ್ಕೆ ದೇವಸ್ಥಾನ ಬಾಗಿಲು ಬಂದ್​ ಮಾಡಲಾಗಿದ್ದು, ಎಂದಿನಂತೆ ಮತ್ತೆ ಸಂಜೆ ತೆರೆಯಲಾಗುತ್ತದೆ. ಜಿಲ್ಲಾಡಳಿತ ದೇವಸ್ಥಾನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಟ್ಟಿದೆ. ಸವರ್ಣೀಯರು ಉತ್ಸವ ಮೂರ್ತಿಯನ್ನು ಮತ್ತೊಂದು ಕೊಠಡಿಯಲ್ಲಿ ಇಟ್ಟಿದ್ದು, ಸಂಜೆ ಮತ್ತೆ ಉತ್ಸವ ಮೂರ್ತಿಯನ್ನ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ.

ತಹಶೀಲ್ದಾರ್ ಶಿವಕುಮಾರ್ ಬಿರದಾರ್ ಪ್ರತಿಕ್ರಿಯಿಸಿದ್ದು, ದೇವಸ್ಥಾನಕ್ಕೆ ಪ್ರವೇಶ ಇಲ್ಲ ಎಂದು ನಮಗೆ ದೂರು ಕೊಟ್ಟಿದ್ದರು. ದಲಿತ ಕುಟುಂಬದವರಿಗೆ ಪ್ರವೇಶ ಇಲ್ಲ ನಮಗೆ ಮಾಹಿತಿ ಕೊಟ್ಟಿದ್ದರು. 4 ತಿಂಗಳ ಹಿಂದೆ ಎಲ್ಲರು ದೇವಸ್ಥಾನಕ್ಕೆ ಹೋಗುತ್ತಿದ್ದರು. ಕೆಲ ದಿನಗಳ ಹಿಂದೆ ಇಲ್ಲಿ ಸಮಸ್ಯೆ ಉಂಟಾಗಿದೆ. ಇದು ಮುಜುರಾಯಿ ದೇವಸ್ಥಾನವಾಗಿದೆ. ಎಲ್ಲರಿಗೂ ಪ್ರವೇಶಕ್ಕೆ ಅವಕಾಶ ಇದೆ ಎಂದಿದ್ದಾರೆ.

ಸಮಾಜ ಕಲ್ಯಾಣ ಅಧಿಕಾರಿ ಸಿದ್ದಲಿಂಗಪ್ಪ ಮಾತನಾಡಿ, 4 ತಿಂಗಳ ಹಿಂದೆಯಿಂದ ಈ ಸಮಸ್ಯೆ ಇದೆ. ದಲಿತರಿಗೆ ಪ್ರವೇಶಕ್ಕೆ ಬಿಟ್ಟಿಲ್ಲ. 2 ಬಾರಿ ಸಭೆ ಮಾಡಿ ಗ್ರಾಮಸ್ಥರಿಗೆ ತಿಳಿಸಿದ್ದೇವೆ. ಗ್ರಾಮದಲ್ಲಿ ವಿರೋಧ ಇರುವುದರಿಂದ ಡಿಸಿಗೆ ಮಾಹಿತಿ ನೀಡಿದ್ದೇವೆ. ಡಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X